ಬೆಂಗಳೂರಿನ ಮಹಿಳಾ ಪಿಜಿಯೊಂದಕ್ಕೆ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶಿಸಿದ್ದಲ್ಲದೇ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಘಟನೆ ಪಿಜಿಗಳಲ್ಲಿ ಉಳಿದುಕೊಂಡು ಉದ್ಯೋಗ ಮತ್ತು ವಿದ್ಯಾಭ್ಯಾಸ ಮಾಡುತ್ತಿರುವ ಹೆಣ್ಣುಮಕ್ಕಳಲ್ಲಿ ಆತಂಕ ಸೃಷ್ಟಿಸಿದ್ದು, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇದೆಯೇ? ಎಂಬ ಪ್ರಶ್ನೆ ಮೂಡಿಸಿದೆ. ಬೆಂಗಳೂರಿನ ಸಾಕಷ್ಟು ಮಹಿಳಾ ಪಿಜಿಗಳಲ್ಲಿ ವಿದ್ಯಾರ್ಥಿನಿಯರು, ಮಹಿಳಾ ಉದ್ಯೋಗಿಗಳು ಉಳಿದುಕೊಂಡಿದ್ದಾರೆ.
ಇವರಲ್ಲಿ ಅನೇಕರು ಗ್ರಾಮಾಂತರ ಭಾಗಗಳಿಂದ ಬಂದವರಾಗಿದ್ದಾರೆ. ಇಂತಹ
ಪಿಜಿಗಳಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕಾದದ್ದು ಪಿಜಿ ಮಾಲೀಕರ ಜವಾಬ್ದಾರಿ. ಆದರೆ ಇಲ್ಲಿ ಪಿಜಿಯೊಳಗೆ ವ್ಯಕ್ತಿಯೊಬ್ಬ ನುಗ್ಗಿ ಕೊಲೆ ಮಾಡಿಹೋಗಿದ್ದಾನೆ ಎಂದರೆ ಈ ಪಿಜಿಯಲ್ಲಿ ಭದ್ರತಾ ಲೋಪ ಇದೆ ಎಂದೇ ಅರ್ಥ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈ ಪಿಜಿ ಮಾಲೀಕರ ವಿರುದ್ಧವೂ ಕ್ರಮಕೈಗೊಳ್ಳುವ ಜತೆಗೆ ಅನುಮತಿ ಇಲ್ಲದೆ ನಡೆಸುತ್ತಿರುವ ಪಿಜಿಗಳನ್ನು ಮುಚ್ಚಿಸಬೇಕಿದೆ. ನಗರ ಪ್ರದೇಶಗಳಲ್ಲಿ ಪಿಜಿ ನಡೆಸುವವರು ಕಡ್ಡಾಯವಾಗಿ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಹಾಗೂ ಸೆಕ್ಯೂರಿಟಿಗಳನ್ನು ನಿಯೋಜಿಸುವಂತೆ
ಸೂಚಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…