ಓದುಗರ ಪತ್ರ

ಓದುಗರ ಪತ್ರ | ಶೌಚಾಲಯ ವ್ಯವಸ್ಥೆ ಕಲ್ಪಿಸಿ

ಮೈಸೂರು ಜಿಲ್ಲೆ ಎಚ್. ಡಿ. ಕೋಟೆ ತಾಲ್ಲೂಕಿನ ಹ್ಯಾಂಡ್ ಪೋಸ್ಟ್ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದು, ಪ್ರತಿ ಭಾನುವಾರ ದನಗಳ ಸಂತೆ ನಡೆಯುತ್ತದೆ. ಹೂವು, ಶುಂಠಿ, ತರಕಾರಿ ವ್ಯಾಪಾರವೂ ಜೋರಾಗಿ ನಡೆಯುತ್ತದೆ.

ಪ್ರತಿನಿತ್ಯ ಇಲ್ಲಿಗೆ ವ್ಯಾಪಾರ ನಿಮಿತ್ತ ಸಾವಿರಾರು ಮಂದಿ ಭೇಟಿ ನೀಡುತ್ತಾರೆ. ಇಲ್ಲಿನ ಮಾನಂದವಾಡಿ ರಸ್ತೆಯಲ್ಲಿದ್ದ ಸಾರ್ವಜನಿಕ ಶೌಚಾಲಯವನ್ನು ಮುಚ್ಚಿರುವುದರಿಂದ ಸಾರ್ವಜನಿಕರಿಗೆ ಶೌಚಕ್ಕೆ ತೆರಳಲು ತೀವ್ರ ತೊಂದರೆಯಾಗಿದೆ. ಶೌಚಾಲಯ ನಿರ್ವಹಣೆಯು ಎಚ್. ಡಿ. ಕೋಟೆ ಪುರಸಭೆ ವ್ಯಾಪ್ತಿಗೆ ಬರುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಈ ಶೌಚಾಲಯವನ್ನು ದುರಸ್ತಿ ಮಾಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾಲ್ಲೂಕು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

23 mins ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

1 hour ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

2 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

6 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 hours ago