ರಾಜ್ಯದಲ್ಲಿ ಕಳ್ಳತನ, ಎಟಿಎಂ, ಬ್ಯಾಂಕ್ ದರೋಡೆ ಹಾಗೂ ವಾಹನಗಳನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಇತ್ತೀಚೆಗೆ ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ೯೩ ಲಕ್ಷ ರೂ. ಗಳನ್ನು ದರೋಡೆ ಮಾಡಲಾಗಿದೆ. ಅಲ್ಲದೆ ಮಂಗಳೂರಿನಲ್ಲಿ ಕೋಟೆಕಾರು ಸಹಕಾರ ಬ್ಯಾಂಕ್ ದರೋಡೆ ಮಾಡಿ ಲಕ್ಷಾಂತರ ರೂ. ಮೌಲ್ಯದ ಒಡವೆ ದೋಚಲಾಗಿದೆ.
ಇವುಗಳೊಂದಿಗೆ ಅಮಾನವೀಯ ಕೃತ್ಯಗಳೂ ಹೆಚ್ಚಾಗುತ್ತಿದ್ದು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ ಕ್ರೌರ್ಯ ಮೆರೆದಿದ್ದರೆ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ಹಿಂಸಿಸಲಾಗಿದೆ. ನಂಜನಗೂಡಿನಲ್ಲಿ ಕರುವಿನ ಬಾಲ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ದರೋಡೆ ಪ್ರಕರಣ ಈಗ ಮೈಸೂರಿನಲ್ಲಿಯೂ ದಾಖಲಾಗಿದ್ದು, ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಕೇರಳ ಮೂಲದ ವ್ಯಕ್ತಿಯ ಕಾರನ್ನು ಅಡ್ಡಗಟ್ಟಿದ ಐವರು ಮುಸುಕುಧಾರಿಗಳು ಕಾರನ್ನು ಅಪಹರಿಸಿದಲ್ಲದೆ ೧. ೫೦ ಲಕ್ಷ ರೂ. ಗಳನ್ನು ದೋಚಿದ್ದಾರೆ. ಇವುಗಳೊಂದಿಗೆ ಮಂಡ್ಯ, ಮೈಸೂರು, ಹುಣಸೂರಿನಲ್ಲಿ ಎಟಿಎಂ ದರೋಡೆಗಳು ಹೆಚ್ಚಾಗುತ್ತಿದ್ದು, ಜನರು ಓಡಾಡಲು ಆತಂಕಪಡುವಂತಾಗಿದೆ. ಇಂತಹ ಅಪರಾಧಿಕ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಇವುಗಳಿಗೆ ಕಡಿವಾಣ ಹಾಕಲು ಮುಂದಾಗಬೇಕಿದ್ದ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸ. -ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…