ರಾಜ್ಯದಲ್ಲಿ ಕಳ್ಳತನ, ಎಟಿಎಂ, ಬ್ಯಾಂಕ್ ದರೋಡೆ ಹಾಗೂ ವಾಹನಗಳನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಇತ್ತೀಚೆಗೆ ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ೯೩ ಲಕ್ಷ ರೂ. ಗಳನ್ನು ದರೋಡೆ ಮಾಡಲಾಗಿದೆ. ಅಲ್ಲದೆ ಮಂಗಳೂರಿನಲ್ಲಿ ಕೋಟೆಕಾರು ಸಹಕಾರ ಬ್ಯಾಂಕ್ ದರೋಡೆ ಮಾಡಿ ಲಕ್ಷಾಂತರ ರೂ. ಮೌಲ್ಯದ ಒಡವೆ ದೋಚಲಾಗಿದೆ.
ಇವುಗಳೊಂದಿಗೆ ಅಮಾನವೀಯ ಕೃತ್ಯಗಳೂ ಹೆಚ್ಚಾಗುತ್ತಿದ್ದು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ ಕ್ರೌರ್ಯ ಮೆರೆದಿದ್ದರೆ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ಹಿಂಸಿಸಲಾಗಿದೆ. ನಂಜನಗೂಡಿನಲ್ಲಿ ಕರುವಿನ ಬಾಲ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.
ದರೋಡೆ ಪ್ರಕರಣ ಈಗ ಮೈಸೂರಿನಲ್ಲಿಯೂ ದಾಖಲಾಗಿದ್ದು, ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಕೇರಳ ಮೂಲದ ವ್ಯಕ್ತಿಯ ಕಾರನ್ನು ಅಡ್ಡಗಟ್ಟಿದ ಐವರು ಮುಸುಕುಧಾರಿಗಳು ಕಾರನ್ನು ಅಪಹರಿಸಿದಲ್ಲದೆ ೧. ೫೦ ಲಕ್ಷ ರೂ. ಗಳನ್ನು ದೋಚಿದ್ದಾರೆ. ಇವುಗಳೊಂದಿಗೆ ಮಂಡ್ಯ, ಮೈಸೂರು, ಹುಣಸೂರಿನಲ್ಲಿ ಎಟಿಎಂ ದರೋಡೆಗಳು ಹೆಚ್ಚಾಗುತ್ತಿದ್ದು, ಜನರು ಓಡಾಡಲು ಆತಂಕಪಡುವಂತಾಗಿದೆ. ಇಂತಹ ಅಪರಾಧಿಕ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಇವುಗಳಿಗೆ ಕಡಿವಾಣ ಹಾಕಲು ಮುಂದಾಗಬೇಕಿದ್ದ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸ. -ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…