ಓದುಗರ ಪತ್ರ

ಓದುಗರ ಪತ್ರ | ದರೋಡೆ ಪ್ರಕರಣಗಳಿಗೆ ಕಡಿವಾಣ ಹಾಕಿ

ರಾಜ್ಯದಲ್ಲಿ ಕಳ್ಳತನ, ಎಟಿಎಂ, ಬ್ಯಾಂಕ್ ದರೋಡೆ ಹಾಗೂ ವಾಹನಗಳನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಇತ್ತೀಚೆಗೆ ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ೯೩ ಲಕ್ಷ ರೂ. ಗಳನ್ನು ದರೋಡೆ ಮಾಡಲಾಗಿದೆ. ಅಲ್ಲದೆ ಮಂಗಳೂರಿನಲ್ಲಿ ಕೋಟೆಕಾರು ಸಹಕಾರ ಬ್ಯಾಂಕ್ ದರೋಡೆ ಮಾಡಿ ಲಕ್ಷಾಂತರ ರೂ. ಮೌಲ್ಯದ ಒಡವೆ ದೋಚಲಾಗಿದೆ.

ಇವುಗಳೊಂದಿಗೆ ಅಮಾನವೀಯ ಕೃತ್ಯಗಳೂ ಹೆಚ್ಚಾಗುತ್ತಿದ್ದು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ ಕ್ರೌರ್ಯ ಮೆರೆದಿದ್ದರೆ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ಹಿಂಸಿಸಲಾಗಿದೆ. ನಂಜನಗೂಡಿನಲ್ಲಿ ಕರುವಿನ ಬಾಲ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ದರೋಡೆ ಪ್ರಕರಣ ಈಗ ಮೈಸೂರಿನಲ್ಲಿಯೂ ದಾಖಲಾಗಿದ್ದು, ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಕೇರಳ ಮೂಲದ ವ್ಯಕ್ತಿಯ ಕಾರನ್ನು ಅಡ್ಡಗಟ್ಟಿದ ಐವರು ಮುಸುಕುಧಾರಿಗಳು ಕಾರನ್ನು ಅಪಹರಿಸಿದಲ್ಲದೆ ೧. ೫೦ ಲಕ್ಷ ರೂ. ಗಳನ್ನು ದೋಚಿದ್ದಾರೆ. ಇವುಗಳೊಂದಿಗೆ ಮಂಡ್ಯ, ಮೈಸೂರು, ಹುಣಸೂರಿನಲ್ಲಿ ಎಟಿಎಂ ದರೋಡೆಗಳು ಹೆಚ್ಚಾಗುತ್ತಿದ್ದು, ಜನರು ಓಡಾಡಲು ಆತಂಕಪಡುವಂತಾಗಿದೆ. ಇಂತಹ ಅಪರಾಧಿಕ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಇವುಗಳಿಗೆ ಕಡಿವಾಣ ಹಾಕಲು ಮುಂದಾಗಬೇಕಿದ್ದ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸ. -ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

37 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

42 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

47 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

51 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

57 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

58 mins ago