ಓದುಗರ ಪತ್ರ

ಓದುಗರ ಪತ್ರ | ದರೋಡೆ ಪ್ರಕರಣಗಳಿಗೆ ಕಡಿವಾಣ ಹಾಕಿ

ರಾಜ್ಯದಲ್ಲಿ ಕಳ್ಳತನ, ಎಟಿಎಂ, ಬ್ಯಾಂಕ್ ದರೋಡೆ ಹಾಗೂ ವಾಹನಗಳನ್ನು ಅಡ್ಡಗಟ್ಟಿ ಬೆದರಿಸಿ ದರೋಡೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಇತ್ತೀಚೆಗೆ ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ೯೩ ಲಕ್ಷ ರೂ. ಗಳನ್ನು ದರೋಡೆ ಮಾಡಲಾಗಿದೆ. ಅಲ್ಲದೆ ಮಂಗಳೂರಿನಲ್ಲಿ ಕೋಟೆಕಾರು ಸಹಕಾರ ಬ್ಯಾಂಕ್ ದರೋಡೆ ಮಾಡಿ ಲಕ್ಷಾಂತರ ರೂ. ಮೌಲ್ಯದ ಒಡವೆ ದೋಚಲಾಗಿದೆ.

ಇವುಗಳೊಂದಿಗೆ ಅಮಾನವೀಯ ಕೃತ್ಯಗಳೂ ಹೆಚ್ಚಾಗುತ್ತಿದ್ದು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ ಕ್ರೌರ್ಯ ಮೆರೆದಿದ್ದರೆ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ಹಿಂಸಿಸಲಾಗಿದೆ. ನಂಜನಗೂಡಿನಲ್ಲಿ ಕರುವಿನ ಬಾಲ ಕತ್ತರಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ದರೋಡೆ ಪ್ರಕರಣ ಈಗ ಮೈಸೂರಿನಲ್ಲಿಯೂ ದಾಖಲಾಗಿದ್ದು, ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಕೇರಳ ಮೂಲದ ವ್ಯಕ್ತಿಯ ಕಾರನ್ನು ಅಡ್ಡಗಟ್ಟಿದ ಐವರು ಮುಸುಕುಧಾರಿಗಳು ಕಾರನ್ನು ಅಪಹರಿಸಿದಲ್ಲದೆ ೧. ೫೦ ಲಕ್ಷ ರೂ. ಗಳನ್ನು ದೋಚಿದ್ದಾರೆ. ಇವುಗಳೊಂದಿಗೆ ಮಂಡ್ಯ, ಮೈಸೂರು, ಹುಣಸೂರಿನಲ್ಲಿ ಎಟಿಎಂ ದರೋಡೆಗಳು ಹೆಚ್ಚಾಗುತ್ತಿದ್ದು, ಜನರು ಓಡಾಡಲು ಆತಂಕಪಡುವಂತಾಗಿದೆ. ಇಂತಹ ಅಪರಾಧಿಕ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಇವುಗಳಿಗೆ ಕಡಿವಾಣ ಹಾಕಲು ಮುಂದಾಗಬೇಕಿದ್ದ ಸರ್ಕಾರ ಕಣ್ಣು ಮುಚ್ಚಿ ಕುಳಿತಿರುವುದು ವಿಪರ್ಯಾಸ. -ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

48 mins ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

1 hour ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

6 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

22 hours ago