ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ.
ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ ಬೆಟ್ಟಿಂಗ್ ದಂಧೆಯೂ ಹೆಚ್ಚಾಗುತ್ತದೆ. ಅದೆಷ್ಟೋ ಯುವಕರು ಈ ಬೆಟ್ಟಿಂಗ್ ಜಾಲಕ್ಕೆ ಸಿಲುಕಿ ತಮ್ಮ ಬದುಕನ್ನೇ ಹಾಳುಮಾಡಿಕೊಂಡಿರುವ ಉದಾಹರಣೆಗಳಿವೆ. ಯುವಕರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುವ ಬುಕ್ಕಿಗಳು ಕಾಲೇಜು ವಿದ್ಯಾರ್ಥಿಗಳು, ಹೋಟೆಲ್, ಮಾಲ್, ವಿವಿಧ ಶೋ ರೂಮ್ಗಳಲ್ಲಿ ಕೆಲಸ ಮಾಡುವ ಯುವಕರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಬೆಟ್ಟಿಂಗ್ ಭೂತ ಹಳ್ಳಿಗಳಿಗೂ ಕಾಲಿಟ್ಟಿರುವುದು ದುರಂತವೇ ಸರಿ. ಹಲವು ಯುವಕರು ಬೆಟ್ಟಿಂಗ್ ಕಟ್ಟುವ ಸಲುವಾಗಿ ಸಾಲ ಮಾಡಿಕೊಂಡು ಬಳಿಕ ಬುಕ್ಕಿಗಳಿಂದ ಮೋಸಹೋಗಿ ಹಣ ಕಳೆದುಕೊಳ್ಳುವ ಜತೆಗೆ ಸಾಲ ತೀರಿಸಲಾಗದೆ ಆತ್ಮಹತ್ಯೆಯ ಹಾದಿ ಹಿಡಿದ ನೂರಾರು ಉದಾಹರಣೆಗಳಿವೆ.
ಬೆಟ್ಟಿಂಗ್ ದಂಧೆ ಫೋನ್ ಮೂಲಕವೇ ನಡೆಯುತ್ತಿದ್ದರೂ ಸೈಬರ್ ಕ್ರೈಂ ವಿಭಾಗದ ಪೊಲೀಸರು ಇದಕ್ಕೆ ಕಡಿವಾಣ ಹಾಕಲು ಮುಂದಾಗದಿರುವುದು ಬೇಸರದ ಸಂಗತಿ. ಪೊಲೀಸ್ ಇಲಾಖೆ ಈ ಬಾರಿಯಾದರೂ ಎಚ್ಚೆತ್ತುಕೊಂಡು ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕು. -ಎಚ್.ಕೆ.ರಂಜಿತ, ಹಾಸನ.
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಧರ್ಬಾಲ್ ಜಿಲ್ಲೆಯ ಝೋಜಿಲಾ ಪಾಸ್ ಬಳಿಯ ಝೀರೋ ಪಾಯಿಂಟ್ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…