ಓದುಗರ ಪತ್ರ

ಓದುಗರ ಪತ್ರ | ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಿ

ಮಾರ್ಚ್ ೨೨ರಿಂದ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಮುಂದಿನ ೨ ತಿಂಗಳ ಕಾಲ ಯುವಕರು ಕ್ರಿಕೆಟ್ ಹಬ್ಬದಲ್ಲಿ ಮುಳುಗಿಹೋಗುತ್ತಾರೆ.

ಐಪಿಎಲ್ ಆರಂಭಗೊಳ್ಳುತ್ತಿದ್ದಂತೆಯೇ ಬೆಟ್ಟಿಂಗ್ ದಂಧೆಯೂ ಹೆಚ್ಚಾಗುತ್ತದೆ. ಅದೆಷ್ಟೋ ಯುವಕರು ಈ ಬೆಟ್ಟಿಂಗ್ ಜಾಲಕ್ಕೆ ಸಿಲುಕಿ ತಮ್ಮ ಬದುಕನ್ನೇ ಹಾಳುಮಾಡಿಕೊಂಡಿರುವ ಉದಾಹರಣೆಗಳಿವೆ. ಯುವಕರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುವ ಬುಕ್ಕಿಗಳು ಕಾಲೇಜು ವಿದ್ಯಾರ್ಥಿಗಳು, ಹೋಟೆಲ್, ಮಾಲ್, ವಿವಿಧ ಶೋ ರೂಮ್‌ಗಳಲ್ಲಿ ಕೆಲಸ ಮಾಡುವ ಯುವಕರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಬೆಟ್ಟಿಂಗ್ ಭೂತ ಹಳ್ಳಿಗಳಿಗೂ ಕಾಲಿಟ್ಟಿರುವುದು ದುರಂತವೇ ಸರಿ. ಹಲವು ಯುವಕರು ಬೆಟ್ಟಿಂಗ್ ಕಟ್ಟುವ ಸಲುವಾಗಿ ಸಾಲ ಮಾಡಿಕೊಂಡು ಬಳಿಕ ಬುಕ್ಕಿಗಳಿಂದ ಮೋಸಹೋಗಿ ಹಣ ಕಳೆದುಕೊಳ್ಳುವ ಜತೆಗೆ ಸಾಲ ತೀರಿಸಲಾಗದೆ ಆತ್ಮಹತ್ಯೆಯ ಹಾದಿ ಹಿಡಿದ ನೂರಾರು ಉದಾಹರಣೆಗಳಿವೆ.

ಬೆಟ್ಟಿಂಗ್ ದಂಧೆ ಫೋನ್ ಮೂಲಕವೇ ನಡೆಯುತ್ತಿದ್ದರೂ ಸೈಬರ್ ಕ್ರೈಂ ವಿಭಾಗದ ಪೊಲೀಸರು ಇದಕ್ಕೆ ಕಡಿವಾಣ ಹಾಕಲು ಮುಂದಾಗದಿರುವುದು ಬೇಸರದ ಸಂಗತಿ. ಪೊಲೀಸ್ ಇಲಾಖೆ ಈ ಬಾರಿಯಾದರೂ ಎಚ್ಚೆತ್ತುಕೊಂಡು ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕು. -ಎಚ್.ಕೆ.ರಂಜಿತ, ಹಾಸನ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

3 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

4 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

17 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

17 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

18 hours ago