ಓದುಗರ ಪತ್ರ

ಓದುಗರ ಪತ್ರ | ಉಪನ್ಯಾಸಕರನ್ನು ನೇಮಕ ಮಾಡಿ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದೇಶ ವಿದೇಶಗಳಿಂದ ನೂರಾರು ವಿದ್ಯಾರ್ಥಿಗಳು ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ಚೈನಿಸ್, ಫ್ರೆಂಚ್, ಜರ್ಮನ್, ಇಟಾಲಿಯನ್, ಜಪಾನೀಸ್ ಮತ್ತು ರಷ್ಯನ್ ಭಾಷೆಗಳನ್ನು ಅಧ್ಯಯನ ಮಾಡಲು ಅವಕಾಶವಿದೆ.

ಆದರೆ, ಕೆಲ ವರ್ಷಗಳಿಂದ ಚೈನೀಸ್ ಮತ್ತು ರಷ್ಯನ್ ಭಾಷೆಗಳನ್ನು ಹೊರತುಪಡಿಸಿದರೆ ಉಳಿದ ಭಾಷೆಗಳ ಅಧ್ಯಯನ ವಿಭಾಗಗಳಲ್ಲಿ ಉಪನ್ಯಾಸಕರಿಲ್ಲದೆ ತರಗತಿಗಳೇ ನಡೆಯುತ್ತಿಲ್ಲ. ನಾನೂ ಕೂಡ ಒಂದು ವರ್ಷದಿಂದ ಫ್ರೆಂಚ್ ಅಧ್ಯಯನ ಕೇಂದ್ರಕ್ಕೆ ಸೇರಿ ಆ ಭಾಷೆ ಕಲಿಯುವ ಆಸಕ್ತಿ ತೋರಿದ್ದರೂ ಆ ವಿಭಾಗದಲ್ಲಿ ಉಪನ್ಯಾಸಕರಿಲ್ಲದೆ ತರಗತಿಗಳು ನಡೆಯುತ್ತಿಲ್ಲ. ಇಲ್ಲಿನ ಸಾಕಷ್ಟು ವಿದ್ಯಾರ್ಥಿಗಳು ಓಪನ್ ಎಲೆಕ್ಟಿವ್ ವಿಷಯದ ಆಯ್ಕೆಯಲ್ಲಿ ವಿದೇಶಿ ಭಾಷೆಗಳನ್ನು ಆಯ್ಕೆ ಮಾಡಿಕೊಂಡು ಅಧ್ಯಯನ ಮಾಡುತ್ತಾರೆ. ಆದರೆ ಉಪನ್ಯಾಸಕರಿಲ್ಲದಿರುವುದರಿಂದ ಆ ವಿದ್ಯಾರ್ಥಿಗಳಿಗೆ ಈ ಭಾಷೆಗಳನ್ನು ಅಧ್ಯಯನ ಮಾಡುವ ಅವಕಾಶ ಕೈತಪ್ಪುವಂತಾಗಿದೆ. ಆದ್ದರಿಂದ ಮೈಸೂರು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ವಿದೇಶಿ ಭಾಷೆಗಳ ಅಧ್ಯಯನ ವಿಭಾಗಗಳಿಗೆ ಕೂಡಲೇ ಉಪನ್ಯಾಸಕರನ್ನು ನೇಮಕ ಮಾಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

1 hour ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

7 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

15 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

18 hours ago