ಎಚ್. ಡಿ. ಕೋಟೆ ತಾಲ್ಲೂಕಿನ ಕೆ. ಜಿ. ಹಳ್ಳಿ ಗ್ರಾಮದಲ್ಲಿ ಪ್ರತಿ ಬಾರಿಯೂ ಜನರು ಪಡಿತರ ಪಡೆದುಕೊಳ್ಳಲು ನ್ಯಾಯಬೆಲೆ ಅಂಗಡಿಯ ಮುಂದೆ ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆ. ಜಿ. ಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿ ನಡೆಸುವವರು ಬೇರೆ ಗ್ರಾಮದವರಾಗಿದ್ದು, ಅವರಿಚ್ಛೆಯಂತೆ ಬಂದು ಅಂಗಡಿ ತೆರೆದು ಸಾರ್ವಜನಿಕರ ಬಳಿ ಬಯೋ ಮೆಟ್ರಿಕ್ ಪಡೆದುಕೊಳ್ಳುತ್ತಾರೆ. ಬಯೋಮೆಟ್ರಿಕ್ ಪಡೆದ ಮೂರು-ನಾಲ್ಕು ದಿನಗಳ ಬಳಿಕ ಪಡಿತರ ವಿತರಿಸುತ್ತಿದ್ದಾರೆ. ಅದೂ ಕೂಡ ತಿಂಗಳ ಕೊನೆಯಲ್ಲಿ ಬಯೋಮೆಟ್ರಿಕ್ ಪಡೆದು ಮುಂದಿನ ತಿಂಗಳಿನಲ್ಲಿ ಪಡಿತರ ವಿತರಣೆ ಮಾಡುತ್ತಿದ್ದಾರೆ. ಇದರಿಂದಾಗಿ ಜನರು ಬಯೋಮೆಟ್ರಿಕ್ ನೀಡಲು ಒಂದು ದಿನ, ಪಡಿತರ ಪಡೆದುಕೊಳ್ಳಲು ಒಂದು ದಿನ ಸರದಿ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಗ್ರಾಮದ ಬಹುತೇಕ ಮಂದಿ ಕೂಲಿ ಕೆಲಸಗಾರರು, ಕೃಷಿ ಕಾರ್ಮಿಕ ರಾಗಿದ್ದು, ನಿತ್ಯ ದುಡಿದರೆ ಮಾತ್ರ ಅವರ ಜೀವನ ಬಂಡಿ ಸಾಗುವುದು.
ಹೀಗಿರುವಾಗ ಅವರು ಕೂಲಿ ಕೆಲಸ ಬಿಟ್ಟು ಪಡಿತರಕ್ಕಾಗಿ ೩-೪ ದಿನಗಳು ಕಾಯುತ್ತಾ ಕುಳಿತರೆ ಅವರು ಜೀವನ ಸಾಗಿಸುವುದಾದರೂ ಹೇಗೆ? ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ನ್ಯಾಯಬೆಲೆ ಅಂಗಡಿಯ ಮಾಲೀಕರಿಗೆ ಬಯೋಮೆಟ್ರಿಕ್ ಪಡೆದ ದಿನವೇ ಪಡಿತರ ವಿತರಿಸುವಂತೆ ಆದೇಶಿಸಲಿ. -ಕೆ. ಎಸ್. ಸುರೇಶ್, ಮುಖ್ಯ ಶಿಕ್ಷಕರು, ಸರಗೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…