ಓದುಗರ ಪತ್ರ

ಓದುಗರ ಪತ್ರ | ಪಡಿತರ ವಿತರಣೆಯ ಲೋಪ ಸರಿಪಡಿಸಿ

ಎಚ್. ಡಿ. ಕೋಟೆ ತಾಲ್ಲೂಕಿನ ಕೆ. ಜಿ. ಹಳ್ಳಿ ಗ್ರಾಮದಲ್ಲಿ ಪ್ರತಿ ಬಾರಿಯೂ ಜನರು ಪಡಿತರ ಪಡೆದುಕೊಳ್ಳಲು ನ್ಯಾಯಬೆಲೆ ಅಂಗಡಿಯ ಮುಂದೆ ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆ. ಜಿ. ಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿ ನಡೆಸುವವರು ಬೇರೆ ಗ್ರಾಮದವರಾಗಿದ್ದು, ಅವರಿಚ್ಛೆಯಂತೆ ಬಂದು ಅಂಗಡಿ ತೆರೆದು ಸಾರ್ವಜನಿಕರ ಬಳಿ ಬಯೋ ಮೆಟ್ರಿಕ್ ಪಡೆದುಕೊಳ್ಳುತ್ತಾರೆ. ಬಯೋಮೆಟ್ರಿಕ್ ಪಡೆದ ಮೂರು-ನಾಲ್ಕು ದಿನಗಳ ಬಳಿಕ ಪಡಿತರ ವಿತರಿಸುತ್ತಿದ್ದಾರೆ. ಅದೂ ಕೂಡ ತಿಂಗಳ ಕೊನೆಯಲ್ಲಿ ಬಯೋಮೆಟ್ರಿಕ್ ಪಡೆದು ಮುಂದಿನ ತಿಂಗಳಿನಲ್ಲಿ ಪಡಿತರ ವಿತರಣೆ ಮಾಡುತ್ತಿದ್ದಾರೆ. ಇದರಿಂದಾಗಿ ಜನರು ಬಯೋಮೆಟ್ರಿಕ್ ನೀಡಲು ಒಂದು ದಿನ, ಪಡಿತರ ಪಡೆದುಕೊಳ್ಳಲು ಒಂದು ದಿನ ಸರದಿ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಗ್ರಾಮದ ಬಹುತೇಕ ಮಂದಿ ಕೂಲಿ ಕೆಲಸಗಾರರು, ಕೃಷಿ ಕಾರ್ಮಿಕ ರಾಗಿದ್ದು, ನಿತ್ಯ ದುಡಿದರೆ ಮಾತ್ರ ಅವರ ಜೀವನ ಬಂಡಿ ಸಾಗುವುದು.

ಹೀಗಿರುವಾಗ ಅವರು ಕೂಲಿ ಕೆಲಸ ಬಿಟ್ಟು ಪಡಿತರಕ್ಕಾಗಿ ೩-೪ ದಿನಗಳು ಕಾಯುತ್ತಾ ಕುಳಿತರೆ ಅವರು ಜೀವನ ಸಾಗಿಸುವುದಾದರೂ ಹೇಗೆ? ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ನ್ಯಾಯಬೆಲೆ ಅಂಗಡಿಯ ಮಾಲೀಕರಿಗೆ ಬಯೋಮೆಟ್ರಿಕ್ ಪಡೆದ ದಿನವೇ ಪಡಿತರ ವಿತರಿಸುವಂತೆ ಆದೇಶಿಸಲಿ. -ಕೆ. ಎಸ್. ಸುರೇಶ್, ಮುಖ್ಯ ಶಿಕ್ಷಕರು, ಸರಗೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago