ಓದುಗರ ಪತ್ರ

ಓದುಗರ ಪತ್ರ | ಮೆಟ್ರೋ ಪ್ರಯಾಣ ದರ ತಗ್ಗಿಸಿ

ಇಲ್ಲಿಯವರೆಗೂ ‘ನಮ್ಮ ಮೆಟ್ರೋ’ ಆಗಿದ್ದ ಮೆಟ್ರೋ ಸಾರಿಗೆ ಸೌಲಭ್ಯ ವನ್ನು ಇನ್ನು ಮುಂದೆ ‘ಸರ್ಕಾರದ ಮೆಟ್ರೋ’ ಅಥವಾ ‘ನಿಮ್ಮ ಮೆಟ್ರೋ’ ಎನ್ನಬೇಕಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರು ನಗರ ದಿನೇ ದಿನೇ ಬೆಳವಣಿಗೆಯಾದಷ್ಟು ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದೆ. ಬೆಂಗಳೂರಿನಲ್ಲಿ ಕೇವಲ ೧೦ ಕಿ. ಮೀ. ಕ್ರಮಿಸಲು ಗಂಟೆಗಟ್ಟಲೆ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಹುತೇಕ ಮಂದಿ ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಬಿಎಂಟಿಸಿ ಬಸ್‌ಗಳ ಜತೆಗೆ ಹೆಚ್ಚಾಗಿ ಮೆಟ್ರೋವನ್ನು ಅವಲಂಬಿಸಿದ್ದಾರೆ. ಆದರೆ ಜನರ ಈ ಅವಲಂಬನೆಯನ್ನೇ ಬಂಡವಾಳ ಮಾಡಿಕೊಂಡಿರುವ ಸರ್ಕಾರ ಜನರೊಂದಿಗೆ ಜಿದ್ದಿಗೆ ಬಿದ್ದಂತೆ ಟಿಕೆಟ್ ದರ ಏರಿಕೆ ಮಾಡುತ್ತಿದ್ದು, ಹಗಲು ದರೋಡೆಗೆ ಮುಂದಾಗಿದೆ. ಈಗಾಗಲೇ ಬಸ್ ಪ್ರಯಾಣ ದರದ ಏರಿಕೆಯಿಂದಾಗಿ ಜನರು ತತ್ತರಿಸುತ್ತಿರುವಾಗಲೇ ಮೆಟ್ರೋ ದರವನ್ನೂ ಏರಿಕೆ ಮಾಡಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಏಕಾಏಕಿ ಬೆಲೆಯನ್ನು ದುಪ್ಪಟ್ಟು ಏರಿಸುತ್ತಾ ಹೋದರೆ ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವುದಾದರೂ ಹೇಗೆ? ಸರ್ಕಾರ ತನ್ನ ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವ ಸಲುವಾಗಿ ಅನಗತ್ಯವಾಗಿ ಸಾರ್ವಜನಿಕ ಸಾರಿಗೆ ಪ್ರಯಾಣ ದರ ಏರಿಸುವ ಬದಲು ಬಿಎಂಆರ್‌ಸಿಎಲ್‌ನ ಅನಗತ್ಯ ವೆಚ್ಚಗಳನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಿ. –ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

8 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

9 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

10 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago