ಓದುಗರ ಪತ್ರ

ಓದುಗರ ಪತ್ರ | ಮೆಟ್ರೋ ಪ್ರಯಾಣ ದರ ತಗ್ಗಿಸಿ

ಇಲ್ಲಿಯವರೆಗೂ ‘ನಮ್ಮ ಮೆಟ್ರೋ’ ಆಗಿದ್ದ ಮೆಟ್ರೋ ಸಾರಿಗೆ ಸೌಲಭ್ಯ ವನ್ನು ಇನ್ನು ಮುಂದೆ ‘ಸರ್ಕಾರದ ಮೆಟ್ರೋ’ ಅಥವಾ ‘ನಿಮ್ಮ ಮೆಟ್ರೋ’ ಎನ್ನಬೇಕಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರು ನಗರ ದಿನೇ ದಿನೇ ಬೆಳವಣಿಗೆಯಾದಷ್ಟು ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದೆ. ಬೆಂಗಳೂರಿನಲ್ಲಿ ಕೇವಲ ೧೦ ಕಿ. ಮೀ. ಕ್ರಮಿಸಲು ಗಂಟೆಗಟ್ಟಲೆ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಹುತೇಕ ಮಂದಿ ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಬಿಎಂಟಿಸಿ ಬಸ್‌ಗಳ ಜತೆಗೆ ಹೆಚ್ಚಾಗಿ ಮೆಟ್ರೋವನ್ನು ಅವಲಂಬಿಸಿದ್ದಾರೆ. ಆದರೆ ಜನರ ಈ ಅವಲಂಬನೆಯನ್ನೇ ಬಂಡವಾಳ ಮಾಡಿಕೊಂಡಿರುವ ಸರ್ಕಾರ ಜನರೊಂದಿಗೆ ಜಿದ್ದಿಗೆ ಬಿದ್ದಂತೆ ಟಿಕೆಟ್ ದರ ಏರಿಕೆ ಮಾಡುತ್ತಿದ್ದು, ಹಗಲು ದರೋಡೆಗೆ ಮುಂದಾಗಿದೆ. ಈಗಾಗಲೇ ಬಸ್ ಪ್ರಯಾಣ ದರದ ಏರಿಕೆಯಿಂದಾಗಿ ಜನರು ತತ್ತರಿಸುತ್ತಿರುವಾಗಲೇ ಮೆಟ್ರೋ ದರವನ್ನೂ ಏರಿಕೆ ಮಾಡಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಏಕಾಏಕಿ ಬೆಲೆಯನ್ನು ದುಪ್ಪಟ್ಟು ಏರಿಸುತ್ತಾ ಹೋದರೆ ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವುದಾದರೂ ಹೇಗೆ? ಸರ್ಕಾರ ತನ್ನ ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವ ಸಲುವಾಗಿ ಅನಗತ್ಯವಾಗಿ ಸಾರ್ವಜನಿಕ ಸಾರಿಗೆ ಪ್ರಯಾಣ ದರ ಏರಿಸುವ ಬದಲು ಬಿಎಂಆರ್‌ಸಿಎಲ್‌ನ ಅನಗತ್ಯ ವೆಚ್ಚಗಳನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಿ. –ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

3 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

4 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

5 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

6 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

7 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

8 hours ago