ಓದುಗರ ಪತ್ರ
ಇಲ್ಲಿಯವರೆಗೂ ‘ನಮ್ಮ ಮೆಟ್ರೋ’ ಆಗಿದ್ದ ಮೆಟ್ರೋ ಸಾರಿಗೆ ಸೌಲಭ್ಯ ವನ್ನು ಇನ್ನು ಮುಂದೆ ‘ಸರ್ಕಾರದ ಮೆಟ್ರೋ’ ಅಥವಾ ‘ನಿಮ್ಮ ಮೆಟ್ರೋ’ ಎನ್ನಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು ನಗರ ದಿನೇ ದಿನೇ ಬೆಳವಣಿಗೆಯಾದಷ್ಟು ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದೆ. ಬೆಂಗಳೂರಿನಲ್ಲಿ ಕೇವಲ ೧೦ ಕಿ. ಮೀ. ಕ್ರಮಿಸಲು ಗಂಟೆಗಟ್ಟಲೆ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಹುತೇಕ ಮಂದಿ ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಬಿಎಂಟಿಸಿ ಬಸ್ಗಳ ಜತೆಗೆ ಹೆಚ್ಚಾಗಿ ಮೆಟ್ರೋವನ್ನು ಅವಲಂಬಿಸಿದ್ದಾರೆ. ಆದರೆ ಜನರ ಈ ಅವಲಂಬನೆಯನ್ನೇ ಬಂಡವಾಳ ಮಾಡಿಕೊಂಡಿರುವ ಸರ್ಕಾರ ಜನರೊಂದಿಗೆ ಜಿದ್ದಿಗೆ ಬಿದ್ದಂತೆ ಟಿಕೆಟ್ ದರ ಏರಿಕೆ ಮಾಡುತ್ತಿದ್ದು, ಹಗಲು ದರೋಡೆಗೆ ಮುಂದಾಗಿದೆ. ಈಗಾಗಲೇ ಬಸ್ ಪ್ರಯಾಣ ದರದ ಏರಿಕೆಯಿಂದಾಗಿ ಜನರು ತತ್ತರಿಸುತ್ತಿರುವಾಗಲೇ ಮೆಟ್ರೋ ದರವನ್ನೂ ಏರಿಕೆ ಮಾಡಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಏಕಾಏಕಿ ಬೆಲೆಯನ್ನು ದುಪ್ಪಟ್ಟು ಏರಿಸುತ್ತಾ ಹೋದರೆ ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವುದಾದರೂ ಹೇಗೆ? ಸರ್ಕಾರ ತನ್ನ ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವ ಸಲುವಾಗಿ ಅನಗತ್ಯವಾಗಿ ಸಾರ್ವಜನಿಕ ಸಾರಿಗೆ ಪ್ರಯಾಣ ದರ ಏರಿಸುವ ಬದಲು ಬಿಎಂಆರ್ಸಿಎಲ್ನ ಅನಗತ್ಯ ವೆಚ್ಚಗಳನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಿ. –ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…
ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು…
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…