ಓದುಗರ ಪತ್ರ

ಓದುಗರ ಪತ್ರ | ಮೆಟ್ರೋ ಪ್ರಯಾಣ ದರ ತಗ್ಗಿಸಿ

ಇಲ್ಲಿಯವರೆಗೂ ‘ನಮ್ಮ ಮೆಟ್ರೋ’ ಆಗಿದ್ದ ಮೆಟ್ರೋ ಸಾರಿಗೆ ಸೌಲಭ್ಯ ವನ್ನು ಇನ್ನು ಮುಂದೆ ‘ಸರ್ಕಾರದ ಮೆಟ್ರೋ’ ಅಥವಾ ‘ನಿಮ್ಮ ಮೆಟ್ರೋ’ ಎನ್ನಬೇಕಾದ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರು ನಗರ ದಿನೇ ದಿನೇ ಬೆಳವಣಿಗೆಯಾದಷ್ಟು ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದೆ. ಬೆಂಗಳೂರಿನಲ್ಲಿ ಕೇವಲ ೧೦ ಕಿ. ಮೀ. ಕ್ರಮಿಸಲು ಗಂಟೆಗಟ್ಟಲೆ ಪ್ರಯಾಣಿಸಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಹುತೇಕ ಮಂದಿ ಸಂಚಾರ ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಬಿಎಂಟಿಸಿ ಬಸ್‌ಗಳ ಜತೆಗೆ ಹೆಚ್ಚಾಗಿ ಮೆಟ್ರೋವನ್ನು ಅವಲಂಬಿಸಿದ್ದಾರೆ. ಆದರೆ ಜನರ ಈ ಅವಲಂಬನೆಯನ್ನೇ ಬಂಡವಾಳ ಮಾಡಿಕೊಂಡಿರುವ ಸರ್ಕಾರ ಜನರೊಂದಿಗೆ ಜಿದ್ದಿಗೆ ಬಿದ್ದಂತೆ ಟಿಕೆಟ್ ದರ ಏರಿಕೆ ಮಾಡುತ್ತಿದ್ದು, ಹಗಲು ದರೋಡೆಗೆ ಮುಂದಾಗಿದೆ. ಈಗಾಗಲೇ ಬಸ್ ಪ್ರಯಾಣ ದರದ ಏರಿಕೆಯಿಂದಾಗಿ ಜನರು ತತ್ತರಿಸುತ್ತಿರುವಾಗಲೇ ಮೆಟ್ರೋ ದರವನ್ನೂ ಏರಿಕೆ ಮಾಡಿರುವುದು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಏಕಾಏಕಿ ಬೆಲೆಯನ್ನು ದುಪ್ಪಟ್ಟು ಏರಿಸುತ್ತಾ ಹೋದರೆ ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವುದಾದರೂ ಹೇಗೆ? ಸರ್ಕಾರ ತನ್ನ ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವ ಸಲುವಾಗಿ ಅನಗತ್ಯವಾಗಿ ಸಾರ್ವಜನಿಕ ಸಾರಿಗೆ ಪ್ರಯಾಣ ದರ ಏರಿಸುವ ಬದಲು ಬಿಎಂಆರ್‌ಸಿಎಲ್‌ನ ಅನಗತ್ಯ ವೆಚ್ಚಗಳನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಲಿ. –ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

1 hour ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

1 hour ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

1 hour ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

5 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

5 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

5 hours ago