ಓದುಗರ ಪತ್ರ

ಓದುಗರ ಪತ್ರ | ವಿದ್ಯುತ್ ಗ್ರಾಹಕರ ಹೊರೆ ತಪ್ಪಿಸಿ

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಕೆಪಿಟಿಸಿಎಲ್, ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ.

ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದ್ದು, ಸದ್ಯ ಈ ಪ್ರಕರಣ ಹೈ ಕೋರ್ಟ್ ವಿಚಾರಣೆ ಯಲ್ಲಿದೆ. ಆದರೂ ಅದನ್ನು ಪರಿಗಣಿಸದೆ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯವೇ ಆದರೆ ಅದರ ವೆಚ್ಚವನ್ನು ಸರ್ಕಾರ ಅಥವಾ ಕೆಪಿಟಿಸಿಎಲ್ ಭರಿಸಲಿ.

ಈಗಾಗಲೇ ವಿದ್ಯುತ್ ದರ ಮುಗಿಲು ಮುಟ್ಟಿದೆ. ಜೊತೆಗೆ ಕಳೆದ ಏಪ್ರಿಲ್‌ನಲ್ಲಿ ವಿದ್ಯುತ್ ದರಗಳ ಜೊತೆಗೆ ನಿಗದಿತ ಶುಲ್ಕಗಳನ್ನು ಪ್ರತಿ ಕಿಲೋವ್ಯಾಟ್‌ಗೆ ಒಂದೇ ಬಾರಿಗೆ ೨೫ ರೂ. ಗಳಷ್ಟು ಏರಿಕೆ ಮಾಡಿ ಕನಿಷ್ಠ ದರವನ್ನು ೧೨೦ ರೂ. ನಿಂದ ೧೪೫ ರೂ. ಗಳಿಗೆ ಏರಿಕೆ ಮಾಡಲಾಗಿದೆ. ಇದರಿಂದ ೩ ಕಿಲೋವ್ಯಾಟ್ ಸಾಮರ್ಥ್ಯದ ಮನೆಗೆ ಕನಿಷ್ಠ ವಿದ್ಯುತ್ ದರವೇ ೪೩೫ ರೂಪಾಯಿಗಳಾಗಿದೆ.

ವಿದ್ಯುತ್ ಬಿಲ್ ೯೦೦ ರೂ. ಗಳಾದರೆ ಅದರಲ್ಲಿ ಅರ್ಧ ಕನಿಷ್ಠ ದರವೇ ಆಗಿರುತ್ತದೆ. ಎಂದರೆ ನಾವು ಒಂದು ಯೂನಿಟ್ ವಿದ್ಯುತ್ ಬಳಸದಿದ್ದರೂ ಕೂಡ ತಿಂಗಳಿಗೆ ಕನಿಷ್ಠ ೪೫೦-೫೦೦ ರೂ. ಕಟ್ಟಲೇಬೇಕು. ಇದು ಯಾವ ಲೆಕ್ಕ? ನಾವು ವಿದ್ಯುತ್ ಬಳಸಿದರೆ ಪ್ರತಿ ಯೂನಿಟ್‌ಗೆ ನಿಗದಿಯಾದ ದರ ವನ್ನು ಕಟ್ಟಲು ಬದ್ಧರಾಗಿದ್ದೇವೆ. ಆದರೆ ಮಿನಿಮಂ ಹೆಸರಿನಲ್ಲಿ ಈ ರೀತಿಯ ಸುಲಿಗೆ ಮಾಡುವುದು ತರವಲ್ಲ. ಕನಿಷ್ಠ ದರವನ್ನು ರದ್ದು ಮಾಡಬೇಕು. ಹೀಗೆ ದರಗಳನ್ನು ಪ್ರತಿ ವರ್ಷ, ವರ್ಷದಲ್ಲಿ ೨ ಬಾರಿ ಏರಿಕೆ ಮಾಡಿದರೆ ಜನರಿಗೆ ವಿದ್ಯುತ್ ದರ ಭರಿಸುವುದು ಕಷ್ಟವಾಗುತ್ತದೆ. ಈಗ ಬಹುತೇಕ ಗ್ರಾಹಕರು ಗ್ಯಾರಂಟಿ ಯೋಜನೆ (ಗೃಹ ಜ್ಯೋತಿ)ಯಡಿ ವಿದ್ಯುತ್ ಬಿಲ್ ಅನ್ನು ಸರ್ಕಾರವೇ ಕಟ್ಟುತ್ತಿದೆ. ಇದರಿಂದಾಗಿ ವಿದ್ಯುತ್ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟದೇ ಇರುವುದರಿಂದ ಕೆಪಿಟಿಸಿಎಲ್ ಎಷ್ಟಾದರೂ ದರ ಏರಿಕೆ ಮಾಡಿಕೊಳ್ಳಲಿ ಎಂದು ಉದಾಸೀನ ಮನೋಭಾವನೆಯಿಂದ ಇದ್ದಾರೆ.

ಆದರೆ ಉಚಿತ ವಿದ್ಯುತ್ ಯೋಜನೆಯೇನಾದರೂ ರದ್ದಾದರೆ ಇದರ ಹೊರೆ ವಿದ್ಯುತ್ ಗ್ರಾಹಕರ ಮೇಲೆ ಬೀಳುತ್ತದೆ. ಸರ್ಕಾರ ಹಾಗೂ ಕೆಪಿಟಿಸಿಎಲ್ ಈ ರೀತಿ ವಿದ್ಯುತ್ ದರ ಪರಿಷ್ಕರಣೆಗೆ ಅವಕಾಶ ನೀಡದೆ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಗ್ರಾಹಕರ ಹೊರೆಯನ್ನು ತಪ್ಪಿಸಬೇಕಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

1 hour ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

1 hour ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

3 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

4 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

4 hours ago