ಓದುಗರ ಪತ್ರ

ಓದುಗರ ಪತ್ರ | ವಿದ್ಯುತ್ ಗ್ರಾಹಕರ ಹೊರೆ ತಪ್ಪಿಸಿ

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಕೆಪಿಟಿಸಿಎಲ್, ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ.

ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವಿದ್ದು, ಸದ್ಯ ಈ ಪ್ರಕರಣ ಹೈ ಕೋರ್ಟ್ ವಿಚಾರಣೆ ಯಲ್ಲಿದೆ. ಆದರೂ ಅದನ್ನು ಪರಿಗಣಿಸದೆ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯವೇ ಆದರೆ ಅದರ ವೆಚ್ಚವನ್ನು ಸರ್ಕಾರ ಅಥವಾ ಕೆಪಿಟಿಸಿಎಲ್ ಭರಿಸಲಿ.

ಈಗಾಗಲೇ ವಿದ್ಯುತ್ ದರ ಮುಗಿಲು ಮುಟ್ಟಿದೆ. ಜೊತೆಗೆ ಕಳೆದ ಏಪ್ರಿಲ್‌ನಲ್ಲಿ ವಿದ್ಯುತ್ ದರಗಳ ಜೊತೆಗೆ ನಿಗದಿತ ಶುಲ್ಕಗಳನ್ನು ಪ್ರತಿ ಕಿಲೋವ್ಯಾಟ್‌ಗೆ ಒಂದೇ ಬಾರಿಗೆ ೨೫ ರೂ. ಗಳಷ್ಟು ಏರಿಕೆ ಮಾಡಿ ಕನಿಷ್ಠ ದರವನ್ನು ೧೨೦ ರೂ. ನಿಂದ ೧೪೫ ರೂ. ಗಳಿಗೆ ಏರಿಕೆ ಮಾಡಲಾಗಿದೆ. ಇದರಿಂದ ೩ ಕಿಲೋವ್ಯಾಟ್ ಸಾಮರ್ಥ್ಯದ ಮನೆಗೆ ಕನಿಷ್ಠ ವಿದ್ಯುತ್ ದರವೇ ೪೩೫ ರೂಪಾಯಿಗಳಾಗಿದೆ.

ವಿದ್ಯುತ್ ಬಿಲ್ ೯೦೦ ರೂ. ಗಳಾದರೆ ಅದರಲ್ಲಿ ಅರ್ಧ ಕನಿಷ್ಠ ದರವೇ ಆಗಿರುತ್ತದೆ. ಎಂದರೆ ನಾವು ಒಂದು ಯೂನಿಟ್ ವಿದ್ಯುತ್ ಬಳಸದಿದ್ದರೂ ಕೂಡ ತಿಂಗಳಿಗೆ ಕನಿಷ್ಠ ೪೫೦-೫೦೦ ರೂ. ಕಟ್ಟಲೇಬೇಕು. ಇದು ಯಾವ ಲೆಕ್ಕ? ನಾವು ವಿದ್ಯುತ್ ಬಳಸಿದರೆ ಪ್ರತಿ ಯೂನಿಟ್‌ಗೆ ನಿಗದಿಯಾದ ದರ ವನ್ನು ಕಟ್ಟಲು ಬದ್ಧರಾಗಿದ್ದೇವೆ. ಆದರೆ ಮಿನಿಮಂ ಹೆಸರಿನಲ್ಲಿ ಈ ರೀತಿಯ ಸುಲಿಗೆ ಮಾಡುವುದು ತರವಲ್ಲ. ಕನಿಷ್ಠ ದರವನ್ನು ರದ್ದು ಮಾಡಬೇಕು. ಹೀಗೆ ದರಗಳನ್ನು ಪ್ರತಿ ವರ್ಷ, ವರ್ಷದಲ್ಲಿ ೨ ಬಾರಿ ಏರಿಕೆ ಮಾಡಿದರೆ ಜನರಿಗೆ ವಿದ್ಯುತ್ ದರ ಭರಿಸುವುದು ಕಷ್ಟವಾಗುತ್ತದೆ. ಈಗ ಬಹುತೇಕ ಗ್ರಾಹಕರು ಗ್ಯಾರಂಟಿ ಯೋಜನೆ (ಗೃಹ ಜ್ಯೋತಿ)ಯಡಿ ವಿದ್ಯುತ್ ಬಿಲ್ ಅನ್ನು ಸರ್ಕಾರವೇ ಕಟ್ಟುತ್ತಿದೆ. ಇದರಿಂದಾಗಿ ವಿದ್ಯುತ್ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟದೇ ಇರುವುದರಿಂದ ಕೆಪಿಟಿಸಿಎಲ್ ಎಷ್ಟಾದರೂ ದರ ಏರಿಕೆ ಮಾಡಿಕೊಳ್ಳಲಿ ಎಂದು ಉದಾಸೀನ ಮನೋಭಾವನೆಯಿಂದ ಇದ್ದಾರೆ.

ಆದರೆ ಉಚಿತ ವಿದ್ಯುತ್ ಯೋಜನೆಯೇನಾದರೂ ರದ್ದಾದರೆ ಇದರ ಹೊರೆ ವಿದ್ಯುತ್ ಗ್ರಾಹಕರ ಮೇಲೆ ಬೀಳುತ್ತದೆ. ಸರ್ಕಾರ ಹಾಗೂ ಕೆಪಿಟಿಸಿಎಲ್ ಈ ರೀತಿ ವಿದ್ಯುತ್ ದರ ಪರಿಷ್ಕರಣೆಗೆ ಅವಕಾಶ ನೀಡದೆ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಗ್ರಾಹಕರ ಹೊರೆಯನ್ನು ತಪ್ಪಿಸಬೇಕಾಗಿದೆ.

-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

1 hour ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

1 hour ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

1 hour ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

2 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

5 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

5 hours ago