ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ.
ಆ ದೇವಾಲಯಕ್ಕೆ ತೆರಳಲು ಹೊಸ ಕನ್ನಂಬಾಡಿ ಗ್ರಾಮದಿಂದ ಇರುವ ಸಂಪರ್ಕ ರಸ್ತೆಯು ತುಂಬಾ ಹದಗೆಟ್ಟಿದ್ದು. ವಾಹನ ಸವಾರರು ಹಳ್ಳ ಕೊಳ್ಳಗಳಿಂದ ಬರುವ ದೂಳನ್ನು ಅನಿವಾರ್ಯವಾಗಿ ಸೇವಿಸುತ್ತಾ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ದೇಶದ ನಾನಾ ಭಾಗಗಳಿಂದ ಈ ದೇವಾಲಯದ ರಮಣೀಯ ಸೌಂದರ್ಯವನ್ನು ಸವಿಯಲು ಪ್ರತಿನಿತ್ಯ ಸಹಸ್ರಾರು ಪ್ರವಾಸಿಗರು ತಂಡೋಪ ತಂಡವಾಗಿ ಆಗಮಿಸುತ್ತಾರೆ. ರಸ್ತೆಯ ದುಸ್ಥಿತಿ ನೋಡಿದರೆ ಮತ್ತೊಮ್ಮೆ ಇಲ್ಲಿಗೆ ಬರುವ ಮನಸ್ಸು ಮಾಡುವುದಿಲ್ಲ ಅನಿಸುತ್ತದೆ. ಮಳೆಗಾಲದಲ್ಲಂತೂ ರಸ್ತೆಯ ಸ್ಥಿತಿ ಅಧೋಗತಿ. ಮಳೆ ನೀರಿನಿಂದ ಕೆಸರಿನ ಗುಂಡಿಯಂತಾಗುವ ರಸ್ತೆಯಲ್ಲಿ ಹಲವರು ಬಿದ್ದಿರುವುದು ಉಂಟು.
ಈಗಲಾದರೂ ಇದಕ್ಕೆ ಸಂಬಂಧಪಟ್ಟವರು ಈ ರಸ್ತೆಯನ್ನು ದುರಸ್ತಿ ಮಾಡಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು.
-ಎನ್. ಪಿ. ಪರಶಿವಮೂರ್ತಿ, ನಂಜೀಪುರ. ಸರಗೂರು ತಾ
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…