ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ.
ಆ ದೇವಾಲಯಕ್ಕೆ ತೆರಳಲು ಹೊಸ ಕನ್ನಂಬಾಡಿ ಗ್ರಾಮದಿಂದ ಇರುವ ಸಂಪರ್ಕ ರಸ್ತೆಯು ತುಂಬಾ ಹದಗೆಟ್ಟಿದ್ದು. ವಾಹನ ಸವಾರರು ಹಳ್ಳ ಕೊಳ್ಳಗಳಿಂದ ಬರುವ ದೂಳನ್ನು ಅನಿವಾರ್ಯವಾಗಿ ಸೇವಿಸುತ್ತಾ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ದೇಶದ ನಾನಾ ಭಾಗಗಳಿಂದ ಈ ದೇವಾಲಯದ ರಮಣೀಯ ಸೌಂದರ್ಯವನ್ನು ಸವಿಯಲು ಪ್ರತಿನಿತ್ಯ ಸಹಸ್ರಾರು ಪ್ರವಾಸಿಗರು ತಂಡೋಪ ತಂಡವಾಗಿ ಆಗಮಿಸುತ್ತಾರೆ. ರಸ್ತೆಯ ದುಸ್ಥಿತಿ ನೋಡಿದರೆ ಮತ್ತೊಮ್ಮೆ ಇಲ್ಲಿಗೆ ಬರುವ ಮನಸ್ಸು ಮಾಡುವುದಿಲ್ಲ ಅನಿಸುತ್ತದೆ. ಮಳೆಗಾಲದಲ್ಲಂತೂ ರಸ್ತೆಯ ಸ್ಥಿತಿ ಅಧೋಗತಿ. ಮಳೆ ನೀರಿನಿಂದ ಕೆಸರಿನ ಗುಂಡಿಯಂತಾಗುವ ರಸ್ತೆಯಲ್ಲಿ ಹಲವರು ಬಿದ್ದಿರುವುದು ಉಂಟು.
ಈಗಲಾದರೂ ಇದಕ್ಕೆ ಸಂಬಂಧಪಟ್ಟವರು ಈ ರಸ್ತೆಯನ್ನು ದುರಸ್ತಿ ಮಾಡಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು.
-ಎನ್. ಪಿ. ಪರಶಿವಮೂರ್ತಿ, ನಂಜೀಪುರ. ಸರಗೂರು ತಾ
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…
ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…
ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…
ಪಂಜುಗಂಗೊಳ್ಳಿ ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…