ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ.
ಆ ದೇವಾಲಯಕ್ಕೆ ತೆರಳಲು ಹೊಸ ಕನ್ನಂಬಾಡಿ ಗ್ರಾಮದಿಂದ ಇರುವ ಸಂಪರ್ಕ ರಸ್ತೆಯು ತುಂಬಾ ಹದಗೆಟ್ಟಿದ್ದು. ವಾಹನ ಸವಾರರು ಹಳ್ಳ ಕೊಳ್ಳಗಳಿಂದ ಬರುವ ದೂಳನ್ನು ಅನಿವಾರ್ಯವಾಗಿ ಸೇವಿಸುತ್ತಾ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ದೇಶದ ನಾನಾ ಭಾಗಗಳಿಂದ ಈ ದೇವಾಲಯದ ರಮಣೀಯ ಸೌಂದರ್ಯವನ್ನು ಸವಿಯಲು ಪ್ರತಿನಿತ್ಯ ಸಹಸ್ರಾರು ಪ್ರವಾಸಿಗರು ತಂಡೋಪ ತಂಡವಾಗಿ ಆಗಮಿಸುತ್ತಾರೆ. ರಸ್ತೆಯ ದುಸ್ಥಿತಿ ನೋಡಿದರೆ ಮತ್ತೊಮ್ಮೆ ಇಲ್ಲಿಗೆ ಬರುವ ಮನಸ್ಸು ಮಾಡುವುದಿಲ್ಲ ಅನಿಸುತ್ತದೆ. ಮಳೆಗಾಲದಲ್ಲಂತೂ ರಸ್ತೆಯ ಸ್ಥಿತಿ ಅಧೋಗತಿ. ಮಳೆ ನೀರಿನಿಂದ ಕೆಸರಿನ ಗುಂಡಿಯಂತಾಗುವ ರಸ್ತೆಯಲ್ಲಿ ಹಲವರು ಬಿದ್ದಿರುವುದು ಉಂಟು.
ಈಗಲಾದರೂ ಇದಕ್ಕೆ ಸಂಬಂಧಪಟ್ಟವರು ಈ ರಸ್ತೆಯನ್ನು ದುರಸ್ತಿ ಮಾಡಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು.
-ಎನ್. ಪಿ. ಪರಶಿವಮೂರ್ತಿ, ನಂಜೀಪುರ. ಸರಗೂರು ತಾ
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…