ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ.
ಆ ದೇವಾಲಯಕ್ಕೆ ತೆರಳಲು ಹೊಸ ಕನ್ನಂಬಾಡಿ ಗ್ರಾಮದಿಂದ ಇರುವ ಸಂಪರ್ಕ ರಸ್ತೆಯು ತುಂಬಾ ಹದಗೆಟ್ಟಿದ್ದು. ವಾಹನ ಸವಾರರು ಹಳ್ಳ ಕೊಳ್ಳಗಳಿಂದ ಬರುವ ದೂಳನ್ನು ಅನಿವಾರ್ಯವಾಗಿ ಸೇವಿಸುತ್ತಾ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ದೇಶದ ನಾನಾ ಭಾಗಗಳಿಂದ ಈ ದೇವಾಲಯದ ರಮಣೀಯ ಸೌಂದರ್ಯವನ್ನು ಸವಿಯಲು ಪ್ರತಿನಿತ್ಯ ಸಹಸ್ರಾರು ಪ್ರವಾಸಿಗರು ತಂಡೋಪ ತಂಡವಾಗಿ ಆಗಮಿಸುತ್ತಾರೆ. ರಸ್ತೆಯ ದುಸ್ಥಿತಿ ನೋಡಿದರೆ ಮತ್ತೊಮ್ಮೆ ಇಲ್ಲಿಗೆ ಬರುವ ಮನಸ್ಸು ಮಾಡುವುದಿಲ್ಲ ಅನಿಸುತ್ತದೆ. ಮಳೆಗಾಲದಲ್ಲಂತೂ ರಸ್ತೆಯ ಸ್ಥಿತಿ ಅಧೋಗತಿ. ಮಳೆ ನೀರಿನಿಂದ ಕೆಸರಿನ ಗುಂಡಿಯಂತಾಗುವ ರಸ್ತೆಯಲ್ಲಿ ಹಲವರು ಬಿದ್ದಿರುವುದು ಉಂಟು.
ಈಗಲಾದರೂ ಇದಕ್ಕೆ ಸಂಬಂಧಪಟ್ಟವರು ಈ ರಸ್ತೆಯನ್ನು ದುರಸ್ತಿ ಮಾಡಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು.
-ಎನ್. ಪಿ. ಪರಶಿವಮೂರ್ತಿ, ನಂಜೀಪುರ. ಸರಗೂರು ತಾ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…