ಓದುಗರ ಪತ್ರ

ಓದುಗರ ಪತ್ರ | ಹದಗೆಟ್ಟ ರಸ್ತೆ ದುರಸ್ತಿ ಮಾಡಿಸಿ

ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ.

ಆ ದೇವಾಲಯಕ್ಕೆ ತೆರಳಲು ಹೊಸ ಕನ್ನಂಬಾಡಿ ಗ್ರಾಮದಿಂದ ಇರುವ ಸಂಪರ್ಕ ರಸ್ತೆಯು ತುಂಬಾ ಹದಗೆಟ್ಟಿದ್ದು. ವಾಹನ ಸವಾರರು ಹಳ್ಳ ಕೊಳ್ಳಗಳಿಂದ ಬರುವ ದೂಳನ್ನು ಅನಿವಾರ್ಯವಾಗಿ ಸೇವಿಸುತ್ತಾ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ. ದೇಶದ ನಾನಾ ಭಾಗಗಳಿಂದ ಈ ದೇವಾಲಯದ ರಮಣೀಯ ಸೌಂದರ್ಯವನ್ನು ಸವಿಯಲು ಪ್ರತಿನಿತ್ಯ ಸಹಸ್ರಾರು ಪ್ರವಾಸಿಗರು ತಂಡೋಪ ತಂಡವಾಗಿ ಆಗಮಿಸುತ್ತಾರೆ. ರಸ್ತೆಯ ದುಸ್ಥಿತಿ ನೋಡಿದರೆ ಮತ್ತೊಮ್ಮೆ ಇಲ್ಲಿಗೆ ಬರುವ ಮನಸ್ಸು ಮಾಡುವುದಿಲ್ಲ ಅನಿಸುತ್ತದೆ. ಮಳೆಗಾಲದಲ್ಲಂತೂ ರಸ್ತೆಯ ಸ್ಥಿತಿ ಅಧೋಗತಿ. ಮಳೆ ನೀರಿನಿಂದ ಕೆಸರಿನ ಗುಂಡಿಯಂತಾಗುವ ರಸ್ತೆಯಲ್ಲಿ ಹಲವರು ಬಿದ್ದಿರುವುದು ಉಂಟು.

ಈಗಲಾದರೂ ಇದಕ್ಕೆ ಸಂಬಂಧಪಟ್ಟವರು ಈ ರಸ್ತೆಯನ್ನು ದುರಸ್ತಿ ಮಾಡಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು.

-ಎನ್. ಪಿ. ಪರಶಿವಮೂರ್ತಿ, ನಂಜೀಪುರ. ಸರಗೂರು ತಾ

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago