ಓದುಗರ ಪತ್ರ
ಹುಣಸೂರು ತಾಲ್ಲೂಕಿನ ಉಯಿಗೊಂಡನಹಳ್ಳಿಯ ಬಸ್ ತಂಗುದಾಣದಿಂದ ಹಾದು ಹೋಗುವ ರಸ್ತೆ ದುಸ್ಥಿತಿಯಲ್ಲಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಜಲ್ಲಿ ಮತ್ತು ಮಣ್ಣಿನ ಗುಡ್ಡೆಗಳು, ಮರಳಿನ ಗುಡ್ಡೆಗಳನ್ನು ಹಾಕಲಾಗಿದೆ. ಕೆಲವರು ರಸ್ತೆಯಲ್ಲೇ ಹೂಗಿಡಗಳನ್ನು ಬೆಳೆದಿರುವುದರಿಂದ ಜನರು ತಿರುಗಾಡಲು, ಎತ್ತಿನಗಾಡಿ, ವಾಹನಗಳು ಸಂಚರಿಸಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ಈ ರಸ್ತೆಯಲ್ಲಿ ಗುಡ್ಡೆ ಹಾಕಿರುವ ಜಲ್ಲಿ, ಮಣ್ಣು, ಮರಳು ಹಾಗೂ ಹೂ ಗಿಡಗಳನ್ನು ತೆರವುಗೊಳಿಸಿ ಜನರು ಮತ್ತು ವಾಹನಗಳು ತಿರುಗಾಡಲು ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಅವರು ಕ್ರಮವಹಿಸಬೇಕಾಗಿದೆ.
-ಅಂಗಡಿ ಮಹದೇವ, ಉಯಿಗೊಂಡನಹಳ್ಳಿ, ಹುಣಸೂರು ತಾ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…