ಹಣದುಬ್ಬರದಿಂದ ಬೇಸತ್ತ ದುಡಿಯುವ ವರ್ಗ ವೇತನ ಹೆಚ್ಚಿಸುವಂತೆ ಮನವಿ ಮಾಡಿದಾಗ ನಿರಾಕರಿಸುವ ಸರ್ಕಾರ ಈಗ ಏಕಾಏಕಿ ಜನಪ್ರತಿನಿಧಿಗಳ ಸಂಬಳವನ್ನು ಶೇ. ೫೦ರಷ್ಟು ಹೆಚ್ಚಿಸಲು ಮುಂದಾಗಿರುವುದು ದಿಗ್ಭ್ರಮೆ ಮೂಡಿಸಿದೆ.
ಸರ್ಕಾರ ಜನಪ್ರತಿನಿಧಿಗಳ ಸಂಬಳವನ್ನು ಶೇ. ೧೦ರಿಂದ ಶೇ. ೧೫ರಷ್ಟು ಏರಿಕೆ ಮಾಡಿದ್ದರೆ ಕಾಲಾನುಸಾರ ಏರಿಕೆ ಮಾಡುತ್ತಿದ್ದೇವೆ ಎಂದು ಜನರ ಆಕ್ರೋಶಕ್ಕೂ ಸಮಜಾಯಿಸಿ ನೀಡಬಹುದಿತ್ತು. ಆದರೆ ಸರ್ಕಾರ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿದ ಮಾದರಿಯಲ್ಲೇ ಶೇ. ೫೦ರಷ್ಟು ಏರಿಕೆ ಮಾಡಿ ಎಂದು ಕೇಳಿರುವುದು ಯಾವ ಮಾನದಂಡದಿಂದಲೂ ಒಪ್ಪಲಾಗದು. ವಿಪರ್ಯಾಸವೆಂದರೆ ಆಡಳಿತ ಪಕ್ಷದ ಪ್ರತಿಯೊಂದು ನಿಲುವು ಮತ್ತು ನಿರ್ಧಾರಗಳನ್ನು ವಿರೋಧಿಸುವ ವಿಪಕ್ಷಗಳೂ ಈ ಏರಿಕೆಯ ಪ್ರಸ್ತಾವನೆಯನ್ನು ವಿರೋಧಿಸದೆ ಸಹಮತ ನೀಡಿರುವುದು ವಿಪರ್ಯಾಸವೇ ಸರಿ. -ದಯಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…