ಓದುಗರ ಪತ್ರ

ಓದುಗರ ಪತ್ರ: ಉದ್ಯಾನವನಗಳ ರಕ್ಷಣೆಯಾಗಲಿ

ಇತ್ತೀಚೆಗೆ ಮೈಸೂರಿನ ಅನೇಕ ಉದ್ಯಾನವನಗಳಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುವ ವೇಳೆ ಕಿರಿಕಿರಿಯುಂಟು ಮಾಡುತ್ತಾರೆ.

ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರೀತಿ, ಪ್ರೇಮದ ಹೆಸರಿನಲ್ಲಿ ಕಾಲೇಜಿಗೆ ಹೋಗದೇ ಪಾರ್ಕ್‌ಗಳಲ್ಲಿ ಕೂತು ಕಾಲ ಕಳೆಯುತ್ತಿದ್ದು, ಇದರ ದರ್ಶನ ಸಾರ್ವಜನಿಕರಿಗೆ ಮುಜುಗರ ಉಂಟುಮಾಡುತ್ತಿದೆ. ಇನ್ನು ಕೆಲವು ಉದ್ಯಾನವನಗಳಲ್ಲಿ ಪುಂಡರು ಪಾರ್ಕ್‌ನಲ್ಲಿಯೇ ಮದ್ಯಪಾನ, ಧೂಮಪಾನ ಮಾಡುತ್ತಾರೆ. ಜತೆಗೆ ವಾಯುವಿಹಾರಕ್ಕೆ ಬರುವ ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ಅವರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಇದರಿಂದಾಗಿ ವಾಯುವಿಹಾರಕ್ಕೆ ಬರುವ ಹೆಣ್ಣು ಮಕ್ಕಳು ಹಿಂದೇಟು ಹಾಕುವಂತಾಗಿದೆ.

ಪಾರ್ಕ್‌ಗಳಲ್ಲಿ ಅನಾರೋಗ್ಯ ಪೀಡಿತರು, ಗರ್ಭಿಣಿಯರು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಆದರೆ ಈ ಪಾರ್ಕ್‌ಗಳಲ್ಲಿನ ವಾತಾವರಣ ಅವರ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಹಾಳುಮಾಡುವಂತಿದ್ದು, ಸಂಬಂಧಪಟ್ಟವರು ಪಾರ್ಕ್‌ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಜತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯುವ ಸಮಯದಲ್ಲಿ ಪ್ರವೇಶ ನೀಡಬಾರದು. ಹಾಗೂ ಪಾರ್ಕ್‌ಗಳಿಗೆ ಸೂಕ್ತ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡುವ ಜತೆಗೆ ಪೊಲೀಸ್ ಇಲಾಖೆಯೂ ಪಾರ್ಕ್‌ಗಳಲ್ಲಿ ಆಗಾಗ್ಗೆ ಗಸ್ತು ತಿರುಗುವ ಮೂಲಕ ರಕ್ಷಣೆ ಒದಗಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

3 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

3 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

3 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

4 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

4 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

4 hours ago