ಓದುಗರ ಪತ್ರ
ಇತ್ತೀಚೆಗೆ ಮೈಸೂರಿನ ಅನೇಕ ಉದ್ಯಾನವನಗಳಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುವ ವೇಳೆ ಕಿರಿಕಿರಿಯುಂಟು ಮಾಡುತ್ತಾರೆ.
ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರೀತಿ, ಪ್ರೇಮದ ಹೆಸರಿನಲ್ಲಿ ಕಾಲೇಜಿಗೆ ಹೋಗದೇ ಪಾರ್ಕ್ಗಳಲ್ಲಿ ಕೂತು ಕಾಲ ಕಳೆಯುತ್ತಿದ್ದು, ಇದರ ದರ್ಶನ ಸಾರ್ವಜನಿಕರಿಗೆ ಮುಜುಗರ ಉಂಟುಮಾಡುತ್ತಿದೆ. ಇನ್ನು ಕೆಲವು ಉದ್ಯಾನವನಗಳಲ್ಲಿ ಪುಂಡರು ಪಾರ್ಕ್ನಲ್ಲಿಯೇ ಮದ್ಯಪಾನ, ಧೂಮಪಾನ ಮಾಡುತ್ತಾರೆ. ಜತೆಗೆ ವಾಯುವಿಹಾರಕ್ಕೆ ಬರುವ ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ಅವರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಇದರಿಂದಾಗಿ ವಾಯುವಿಹಾರಕ್ಕೆ ಬರುವ ಹೆಣ್ಣು ಮಕ್ಕಳು ಹಿಂದೇಟು ಹಾಕುವಂತಾಗಿದೆ.
ಪಾರ್ಕ್ಗಳಲ್ಲಿ ಅನಾರೋಗ್ಯ ಪೀಡಿತರು, ಗರ್ಭಿಣಿಯರು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಆದರೆ ಈ ಪಾರ್ಕ್ಗಳಲ್ಲಿನ ವಾತಾವರಣ ಅವರ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಹಾಳುಮಾಡುವಂತಿದ್ದು, ಸಂಬಂಧಪಟ್ಟವರು ಪಾರ್ಕ್ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಜತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯುವ ಸಮಯದಲ್ಲಿ ಪ್ರವೇಶ ನೀಡಬಾರದು. ಹಾಗೂ ಪಾರ್ಕ್ಗಳಿಗೆ ಸೂಕ್ತ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡುವ ಜತೆಗೆ ಪೊಲೀಸ್ ಇಲಾಖೆಯೂ ಪಾರ್ಕ್ಗಳಲ್ಲಿ ಆಗಾಗ್ಗೆ ಗಸ್ತು ತಿರುಗುವ ಮೂಲಕ ರಕ್ಷಣೆ ಒದಗಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…
ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…
ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…