ಓದುಗರ ಪತ್ರ

ಓದುಗರ ಪತ್ರ: ಉದ್ಯಾನವನಗಳ ರಕ್ಷಣೆಯಾಗಲಿ

ಇತ್ತೀಚೆಗೆ ಮೈಸೂರಿನ ಅನೇಕ ಉದ್ಯಾನವನಗಳಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುವ ವೇಳೆ ಕಿರಿಕಿರಿಯುಂಟು ಮಾಡುತ್ತಾರೆ.

ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರೀತಿ, ಪ್ರೇಮದ ಹೆಸರಿನಲ್ಲಿ ಕಾಲೇಜಿಗೆ ಹೋಗದೇ ಪಾರ್ಕ್‌ಗಳಲ್ಲಿ ಕೂತು ಕಾಲ ಕಳೆಯುತ್ತಿದ್ದು, ಇದರ ದರ್ಶನ ಸಾರ್ವಜನಿಕರಿಗೆ ಮುಜುಗರ ಉಂಟುಮಾಡುತ್ತಿದೆ. ಇನ್ನು ಕೆಲವು ಉದ್ಯಾನವನಗಳಲ್ಲಿ ಪುಂಡರು ಪಾರ್ಕ್‌ನಲ್ಲಿಯೇ ಮದ್ಯಪಾನ, ಧೂಮಪಾನ ಮಾಡುತ್ತಾರೆ. ಜತೆಗೆ ವಾಯುವಿಹಾರಕ್ಕೆ ಬರುವ ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ಅವರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಇದರಿಂದಾಗಿ ವಾಯುವಿಹಾರಕ್ಕೆ ಬರುವ ಹೆಣ್ಣು ಮಕ್ಕಳು ಹಿಂದೇಟು ಹಾಕುವಂತಾಗಿದೆ.

ಪಾರ್ಕ್‌ಗಳಲ್ಲಿ ಅನಾರೋಗ್ಯ ಪೀಡಿತರು, ಗರ್ಭಿಣಿಯರು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಆದರೆ ಈ ಪಾರ್ಕ್‌ಗಳಲ್ಲಿನ ವಾತಾವರಣ ಅವರ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಹಾಳುಮಾಡುವಂತಿದ್ದು, ಸಂಬಂಧಪಟ್ಟವರು ಪಾರ್ಕ್‌ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಜತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯುವ ಸಮಯದಲ್ಲಿ ಪ್ರವೇಶ ನೀಡಬಾರದು. ಹಾಗೂ ಪಾರ್ಕ್‌ಗಳಿಗೆ ಸೂಕ್ತ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡುವ ಜತೆಗೆ ಪೊಲೀಸ್ ಇಲಾಖೆಯೂ ಪಾರ್ಕ್‌ಗಳಲ್ಲಿ ಆಗಾಗ್ಗೆ ಗಸ್ತು ತಿರುಗುವ ಮೂಲಕ ರಕ್ಷಣೆ ಒದಗಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

3 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

4 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

5 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

6 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

11 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

11 hours ago