ಓದುಗರ ಪತ್ರ
ಇತ್ತೀಚೆಗೆ ಮೈಸೂರಿನ ಅನೇಕ ಉದ್ಯಾನವನಗಳಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ವಾಕಿಂಗ್ ಮಾಡುವ ವೇಳೆ ಕಿರಿಕಿರಿಯುಂಟು ಮಾಡುತ್ತಾರೆ.
ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರೀತಿ, ಪ್ರೇಮದ ಹೆಸರಿನಲ್ಲಿ ಕಾಲೇಜಿಗೆ ಹೋಗದೇ ಪಾರ್ಕ್ಗಳಲ್ಲಿ ಕೂತು ಕಾಲ ಕಳೆಯುತ್ತಿದ್ದು, ಇದರ ದರ್ಶನ ಸಾರ್ವಜನಿಕರಿಗೆ ಮುಜುಗರ ಉಂಟುಮಾಡುತ್ತಿದೆ. ಇನ್ನು ಕೆಲವು ಉದ್ಯಾನವನಗಳಲ್ಲಿ ಪುಂಡರು ಪಾರ್ಕ್ನಲ್ಲಿಯೇ ಮದ್ಯಪಾನ, ಧೂಮಪಾನ ಮಾಡುತ್ತಾರೆ. ಜತೆಗೆ ವಾಯುವಿಹಾರಕ್ಕೆ ಬರುವ ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ಅವರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಇದರಿಂದಾಗಿ ವಾಯುವಿಹಾರಕ್ಕೆ ಬರುವ ಹೆಣ್ಣು ಮಕ್ಕಳು ಹಿಂದೇಟು ಹಾಕುವಂತಾಗಿದೆ.
ಪಾರ್ಕ್ಗಳಲ್ಲಿ ಅನಾರೋಗ್ಯ ಪೀಡಿತರು, ಗರ್ಭಿಣಿಯರು, ಹಿರಿಯ ನಾಗರಿಕರು ವಾಕಿಂಗ್ ಮಾಡುತ್ತಾರೆ. ಆದರೆ ಈ ಪಾರ್ಕ್ಗಳಲ್ಲಿನ ವಾತಾವರಣ ಅವರ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಹಾಳುಮಾಡುವಂತಿದ್ದು, ಸಂಬಂಧಪಟ್ಟವರು ಪಾರ್ಕ್ಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಜತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯುವ ಸಮಯದಲ್ಲಿ ಪ್ರವೇಶ ನೀಡಬಾರದು. ಹಾಗೂ ಪಾರ್ಕ್ಗಳಿಗೆ ಸೂಕ್ತ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡುವ ಜತೆಗೆ ಪೊಲೀಸ್ ಇಲಾಖೆಯೂ ಪಾರ್ಕ್ಗಳಲ್ಲಿ ಆಗಾಗ್ಗೆ ಗಸ್ತು ತಿರುಗುವ ಮೂಲಕ ರಕ್ಷಣೆ ಒದಗಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…