ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ದ ಬಸ್ಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ವಿಶೇಷಚೇತನರಿಗೆ ಆಸನಗಳನ್ನು ಕಾದಿರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅದು ಪಾಲನೆಯಾಗುತ್ತಿಲ್ಲ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಆದರೆ, ಈ ವರ್ಗಗಳಿಗೆ ಆಸನಗಳನ್ನು ಮೀಸಲಿಟ್ಟಿರುವುದು ಸರಿಯಾದ ಕ್ರಮ. ಇದರ ಹೊರತಾದ ಮತ್ತೊಂದು ವಿಚಾರವೆಂದರೆ ಜನಪ್ರತಿನಿಧಿಗಳಿಗೆ ಆಸನವನ್ನು ಮೀಸಲಿರಿಸಿರುವುದು.
ಸಾಮಾನ್ಯವಾಗಿ ವೇಗದೂತ ಬಸ್ಗಳಲ್ಲಿ ಶಾಸಕರು, ಸಂಸದರಿಗೆ ಆಸನಗಳನ್ನು ಮೀಸಲಿರಿಸಲಾಗಿರುತ್ತದೆ. ಹಿಂದೆ ಶಾಸಕರು ಬಸ್ನಲ್ಲಿ ಪ್ರಯಾಣಿಸುತ್ತಿದ್ದುದ್ದನ್ನು ನೋಡಿದ್ದೇವೆ. ಆದರೆ, ಈಗ ಶಾಸಕರು, ಸಂಸದರು ಬಸ್ನಲ್ಲಿ ಪ್ರಯಾಣಿಸುವ ಮಾತು ಬಹಳ ದೂರವಾಗಿದೆ. ಒಂದು ವೇಳೆ ಹಾಗೆ ಪ್ರಯಾಣಿಸಿದರೆ ಅದು ಪತ್ರಿಕೆಗಳಿಗೆ ಅದರಲ್ಲಿಯೂ ದೃಶ್ಯ ಮಾಧ್ಯಮಗಳಿಗೆ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿಬಿಡಬಹುದು. ಇದು ಕೆಎಸ್ಆರ್ಟಿಸಿ ಅವರಿಗೂ ಗೊತ್ತಿದೆ. ಹಾಗಿದ್ದರೂ ಕಿಟಕಿ ಮೇಲೆ ಶಾಸಕರು, ಸಂಸದರು ಎಂಬ ಬರಹ ನೋಡಿದರೆ, ಅದು ಕಿಸಕ್ಕನೆ ನಕ್ಕು ಅಣಕಿಸಿದಂತಾಗುತ್ತದೆ. ಈಗಲಾದೂ ಇಂತಹ ಬರಹಗಳನ್ನು ಕೊನೆಗಾಣಿಸಲು ಕೆಎಸ್ಆರ್ಟಿಸಿ ಅಧಿಕಾರಿಗಳು ಕ್ರಮವಹಿಸಬೇಕು.
-ಎ. ಆರ್ನವ್, ಸರಸ್ವತಿಪುರಂ, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…