ಓದುಗರ ಪತ್ರ

ಓದುಗರ ಪತ್ರ | ಬಸ್‌ಗಳಲ್ಲಿ ಜನಪ್ರತಿನಿಧಿಗಳಿಗೆ ಆಸನ ಮೀಸಲು!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ವಿಶೇಷಚೇತನರಿಗೆ ಆಸನಗಳನ್ನು ಕಾದಿರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅದು ಪಾಲನೆಯಾಗುತ್ತಿಲ್ಲ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಆದರೆ, ಈ ವರ್ಗಗಳಿಗೆ ಆಸನಗಳನ್ನು ಮೀಸಲಿಟ್ಟಿರುವುದು ಸರಿಯಾದ ಕ್ರಮ. ಇದರ ಹೊರತಾದ ಮತ್ತೊಂದು ವಿಚಾರವೆಂದರೆ ಜನಪ್ರತಿನಿಧಿಗಳಿಗೆ ಆಸನವನ್ನು ಮೀಸಲಿರಿಸಿರುವುದು.

ಸಾಮಾನ್ಯವಾಗಿ ವೇಗದೂತ ಬಸ್‌ಗಳಲ್ಲಿ ಶಾಸಕರು, ಸಂಸದರಿಗೆ ಆಸನಗಳನ್ನು ಮೀಸಲಿರಿಸಲಾಗಿರುತ್ತದೆ. ಹಿಂದೆ ಶಾಸಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದುದ್ದನ್ನು ನೋಡಿದ್ದೇವೆ. ಆದರೆ, ಈಗ ಶಾಸಕರು, ಸಂಸದರು ಬಸ್‌ನಲ್ಲಿ ಪ್ರಯಾಣಿಸುವ ಮಾತು ಬಹಳ ದೂರವಾಗಿದೆ. ಒಂದು ವೇಳೆ ಹಾಗೆ ಪ್ರಯಾಣಿಸಿದರೆ ಅದು ಪತ್ರಿಕೆಗಳಿಗೆ ಅದರಲ್ಲಿಯೂ ದೃಶ್ಯ ಮಾಧ್ಯಮಗಳಿಗೆ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿಬಿಡಬಹುದು. ಇದು ಕೆಎಸ್‌ಆರ್‌ಟಿಸಿ ಅವರಿಗೂ ಗೊತ್ತಿದೆ. ಹಾಗಿದ್ದರೂ ಕಿಟಕಿ ಮೇಲೆ ಶಾಸಕರು, ಸಂಸದರು ಎಂಬ ಬರಹ ನೋಡಿದರೆ, ಅದು ಕಿಸಕ್ಕನೆ ನಕ್ಕು ಅಣಕಿಸಿದಂತಾಗುತ್ತದೆ. ಈಗಲಾದೂ ಇಂತಹ ಬರಹಗಳನ್ನು ಕೊನೆಗಾಣಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಕ್ರಮವಹಿಸಬೇಕು.

-ಎ. ಆರ್ನವ್, ಸರಸ್ವತಿಪುರಂ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

2 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

18 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

19 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

20 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

20 hours ago