ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ದ ಬಸ್ಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ವಿಶೇಷಚೇತನರಿಗೆ ಆಸನಗಳನ್ನು ಕಾದಿರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅದು ಪಾಲನೆಯಾಗುತ್ತಿಲ್ಲ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಆದರೆ, ಈ ವರ್ಗಗಳಿಗೆ ಆಸನಗಳನ್ನು ಮೀಸಲಿಟ್ಟಿರುವುದು ಸರಿಯಾದ ಕ್ರಮ. ಇದರ ಹೊರತಾದ ಮತ್ತೊಂದು ವಿಚಾರವೆಂದರೆ ಜನಪ್ರತಿನಿಧಿಗಳಿಗೆ ಆಸನವನ್ನು ಮೀಸಲಿರಿಸಿರುವುದು.
ಸಾಮಾನ್ಯವಾಗಿ ವೇಗದೂತ ಬಸ್ಗಳಲ್ಲಿ ಶಾಸಕರು, ಸಂಸದರಿಗೆ ಆಸನಗಳನ್ನು ಮೀಸಲಿರಿಸಲಾಗಿರುತ್ತದೆ. ಹಿಂದೆ ಶಾಸಕರು ಬಸ್ನಲ್ಲಿ ಪ್ರಯಾಣಿಸುತ್ತಿದ್ದುದ್ದನ್ನು ನೋಡಿದ್ದೇವೆ. ಆದರೆ, ಈಗ ಶಾಸಕರು, ಸಂಸದರು ಬಸ್ನಲ್ಲಿ ಪ್ರಯಾಣಿಸುವ ಮಾತು ಬಹಳ ದೂರವಾಗಿದೆ. ಒಂದು ವೇಳೆ ಹಾಗೆ ಪ್ರಯಾಣಿಸಿದರೆ ಅದು ಪತ್ರಿಕೆಗಳಿಗೆ ಅದರಲ್ಲಿಯೂ ದೃಶ್ಯ ಮಾಧ್ಯಮಗಳಿಗೆ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿಬಿಡಬಹುದು. ಇದು ಕೆಎಸ್ಆರ್ಟಿಸಿ ಅವರಿಗೂ ಗೊತ್ತಿದೆ. ಹಾಗಿದ್ದರೂ ಕಿಟಕಿ ಮೇಲೆ ಶಾಸಕರು, ಸಂಸದರು ಎಂಬ ಬರಹ ನೋಡಿದರೆ, ಅದು ಕಿಸಕ್ಕನೆ ನಕ್ಕು ಅಣಕಿಸಿದಂತಾಗುತ್ತದೆ. ಈಗಲಾದೂ ಇಂತಹ ಬರಹಗಳನ್ನು ಕೊನೆಗಾಣಿಸಲು ಕೆಎಸ್ಆರ್ಟಿಸಿ ಅಧಿಕಾರಿಗಳು ಕ್ರಮವಹಿಸಬೇಕು.
-ಎ. ಆರ್ನವ್, ಸರಸ್ವತಿಪುರಂ, ಮೈಸೂರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…