ಓದುಗರ ಪತ್ರ

ಓದುಗರ ಪತ್ರ | ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಹೆಸರಿಡಿ

ಮೊನ್ನೆ ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ‘ದೇವರಾಜ ಅರಸು ಸಿಟಿ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣವಾಗಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾರಣಕರ್ತರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಎಸ್‌.ಎಂ. ಕೃಷ್ಣರವರು ಬೆಂಗಳೂರಿಗೆ ಐ.ಟಿ., ಬಿ.ಟಿ. ಕಂಪೆನಿಗಳನ್ನು ತಂದು ಲಕ್ಷಾಂತರ ಸಾಫ್ಟ್‌ವೇರ್ ಇಂಜಿನಿಯ‌ಗಳಿಗೆ ಉದ್ಯೋಗಗಳನ್ನು ಕಲ್ಪಿಸಿದ್ದಾರೆ. ಅವರು ಈ ಪ್ರಯತ್ನ ಮಾಡಿದ್ದರ ಪರಿಣಾಮವಾಗಿ ಇಂದು ಬೆಂಗಳೂರು ಇಷ್ಟು ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ. ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ. ಈ ಕೀರ್ತಿ ಎಸ್. ಎಂ.ಕೃಷ್ಣರವರಿಗೆ ಸಲ್ಲಬೇಕು. ಡಿ.ದೇವರಾಜ ಅರಸುರವರು ಈ ರಾಜ್ಯಕ್ಕೆ ಅಪಾರ ಕೊಡುಗೆಗಳನ್ನು ನೀಡಿದ ಮುಖ್ಯಮಂತ್ರಿ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಅನೇಕ ಜನಪರ ಕೆಲಸಗಳಿಂದ ಇಂದಿಗೂ ಜನರಿಗೆ ಅನುಕೂಲಗಳಾಗುತ್ತಿವೆ. ಅವರ ಹೆಸರನ್ನು ಬೇರೆ ನಗರಗಳಿಗೆ ಇಡುವುದು ಸೂಕ್ತ. ಆದರೆ ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಅವರ ಹೆಸರನ್ನು ಇಡುವುದೇ ಸೂಕ್ತ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

4 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

4 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

4 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

4 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

4 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

4 hours ago