ಓದುಗರ ಪತ್ರ

ಓದುಗರ ಪತ್ರ | ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಹೆಸರಿಡಿ

ಮೊನ್ನೆ ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ‘ದೇವರಾಜ ಅರಸು ಸಿಟಿ’ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣವಾಗಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾರಣಕರ್ತರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಎಸ್‌.ಎಂ. ಕೃಷ್ಣರವರು ಬೆಂಗಳೂರಿಗೆ ಐ.ಟಿ., ಬಿ.ಟಿ. ಕಂಪೆನಿಗಳನ್ನು ತಂದು ಲಕ್ಷಾಂತರ ಸಾಫ್ಟ್‌ವೇರ್ ಇಂಜಿನಿಯ‌ಗಳಿಗೆ ಉದ್ಯೋಗಗಳನ್ನು ಕಲ್ಪಿಸಿದ್ದಾರೆ. ಅವರು ಈ ಪ್ರಯತ್ನ ಮಾಡಿದ್ದರ ಪರಿಣಾಮವಾಗಿ ಇಂದು ಬೆಂಗಳೂರು ಇಷ್ಟು ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ. ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ಕ್ಷೇತ್ರದಲ್ಲಿ ಗುರುತಿಸಿಕೊಂಡಿದೆ. ಈ ಕೀರ್ತಿ ಎಸ್. ಎಂ.ಕೃಷ್ಣರವರಿಗೆ ಸಲ್ಲಬೇಕು. ಡಿ.ದೇವರಾಜ ಅರಸುರವರು ಈ ರಾಜ್ಯಕ್ಕೆ ಅಪಾರ ಕೊಡುಗೆಗಳನ್ನು ನೀಡಿದ ಮುಖ್ಯಮಂತ್ರಿ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಅನೇಕ ಜನಪರ ಕೆಲಸಗಳಿಂದ ಇಂದಿಗೂ ಜನರಿಗೆ ಅನುಕೂಲಗಳಾಗುತ್ತಿವೆ. ಅವರ ಹೆಸರನ್ನು ಬೇರೆ ನಗರಗಳಿಗೆ ಇಡುವುದು ಸೂಕ್ತ. ಆದರೆ ಎಲೆಕ್ಟ್ರಾನಿಕ್ ಸಿಟಿಗೆ ಎಸ್.ಎಂ.ಕೃಷ್ಣ ಅವರ ಹೆಸರನ್ನು ಇಡುವುದೇ ಸೂಕ್ತ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago