Mysore
19
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ ಕಂಪೆನಿಗಳು ಕಡ್ಡಾಯವಾಗಿ ಒಪ್ಪಂದದ ಕರಾರು ಪತ್ರ ನೀಡದಿರುವುದು ಮತ್ತು ದಲ್ಲಾಳಿಗಳು ರೈತರಿಂದ ಕಾನೂನುಬಾಹಿರವಾಗಿ ಹಣ ಕಡಿತಗೊಳಿಸುತ್ತಿರುವುದು ಅಕ್ಷಮ್ಯ ಅಪರಾಧ. ಅತಿವೃಷ್ಟಿ ಅನಾವೃಷ್ಟಿ ಹಾಗೂ ಬೆಳೆಗಳಿಗೆ ರೋಗಬಾಧೆಗಳಿಂದ ಕಂಗೆಟ್ಟಿರುವ ರೈತರಿಗೆ ಎಕರೆಗೆ ಕನಿಷ್ಠ 1 ಲಕ್ಷ ರೂ. ಮುಂಗಡ ಹಣ ದೊರೆಯದಿರುವುದು ಅವರನ್ನು ಸಾಲದ ಸುಳಿಗೆ ತಳ್ಳುತ್ತಿದೆ. ಕೃಷಿ ಇಲಾಖೆಯು ಕೇವಲ ಸಭೆಗಳಿಗೆ ಸೀಮಿತವಾಗದೆ ಕಂಪೆನಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರವು ಹತ್ತಿ ಬೆಳೆ ವಿಮೆ ಸೌಲಭ್ಯವನ್ನು ಕಡ್ಡಾಯಗೊಳಿಸಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

Tags:
error: Content is protected !!