ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ ಕಂಪೆನಿಗಳು ಕಡ್ಡಾಯವಾಗಿ ಒಪ್ಪಂದದ ಕರಾರು ಪತ್ರ ನೀಡದಿರುವುದು ಮತ್ತು ದಲ್ಲಾಳಿಗಳು ರೈತರಿಂದ ಕಾನೂನುಬಾಹಿರವಾಗಿ ಹಣ ಕಡಿತಗೊಳಿಸುತ್ತಿರುವುದು ಅಕ್ಷಮ್ಯ ಅಪರಾಧ. ಅತಿವೃಷ್ಟಿ ಅನಾವೃಷ್ಟಿ ಹಾಗೂ ಬೆಳೆಗಳಿಗೆ ರೋಗಬಾಧೆಗಳಿಂದ ಕಂಗೆಟ್ಟಿರುವ ರೈತರಿಗೆ ಎಕರೆಗೆ ಕನಿಷ್ಠ 1 ಲಕ್ಷ ರೂ. ಮುಂಗಡ ಹಣ ದೊರೆಯದಿರುವುದು ಅವರನ್ನು ಸಾಲದ ಸುಳಿಗೆ ತಳ್ಳುತ್ತಿದೆ. ಕೃಷಿ ಇಲಾಖೆಯು ಕೇವಲ ಸಭೆಗಳಿಗೆ ಸೀಮಿತವಾಗದೆ ಕಂಪೆನಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರವು ಹತ್ತಿ ಬೆಳೆ ವಿಮೆ ಸೌಲಭ್ಯವನ್ನು ಕಡ್ಡಾಯಗೊಳಿಸಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…