ಓದುಗರ ಪತ್ರ

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಯುದ್ಧದ ಭೀಕರತೆ ದಿನೇ ದಿನೇ ಹೆಚ್ಚುತ್ತಿದೆ. ಜಾಗತಿಕ ಶಾಂತಿದೂತನಾದ ವಿಶ್ವ ಸಂಸ್ಥೆಯ ನಿಷ್ಕ್ರಿಯತೆ ಎದ್ದು ಕಾಣುತ್ತಿದೆ. ಈ ಬೇಡದ ಯುದ್ಧದಿಂದಾಗಿ ಇಡೀ ವಿಶ್ವವೇ ಪರಿತಪಿಸುವಂತಾಗಿದೆ. ಮತ್ತೊಂದು ಕಡೆ, ತೈಲ ಬೆಲೆಗಳು ಕ್ರಮೇಣ ಏರಲು ಪ್ರಾರಂಭವಾಗಿದೆ. ಈ ಎಲ್ಲದರ ಮಧ್ಯೆ ಸ್ಪೇನ್ ದೇಶ ಯುದ್ಧದ ವಿಚಾರದಲ್ಲಿ ತೆಗೆದುಕೊಂಡಿರುವ ನಿಲುವು ಐತಿಹಾಸಿಕವಾಗಿದೆ.

ಯಾವುದೇ ಕಾರಣಕ್ಕೂ ತನ್ನ ದೇಶದ ವಾಯು ನೆಲೆಗಳನ್ನು ಯುದ್ಧದ ಉದೇಶಕಾಗಿ ಬಳಸಲು ಅನುಮತಿ 9 ನೀಡುವುದಿಲ್ಲ ಹಾಗೂ ಅಂತಹ ಯುದ್ಧಕ್ಕೆ ಸಹಕಾರ ನೀಡುವುದಿಲ್ಲ ಎಂಬ ಆ ದೇಶದ ನಿರ್ಣಯ ಸ್ವಾಗತಾರ್ಹವಾಗಿದೆ. ಇದು ಕೇವಲ ರಾಜತಾಂತ್ರಿಕ ನಿಲುವಲ್ಲ, ಬದಲಿಗೆ ಮಾನವತೆಯ ದನಿ ಎಂದು ಹೇಳಿರುವ ಆ ದೇಶದ ಪ್ರಧಾನ ಮಂತ್ರಿ ಪೆಡೋ ಸ್ಟಾಂಚೆಟ್ ಭೂಮಿಗೆ ಮತ್ತು ಮನುಕುಲಕ್ಕೆ ಅಪಾಯ ತಂದೊಡ್ಡುವ ಯಾವುದೇ ರೀತಿಯ ಯುದ್ಧೋನ್ಮಾನದ ಕಾರ್ಯಗಳನ್ನು ತಾನು ಬೆಂಬಲಿಸುವುದಿಲ್ಲ ಎಂಬ ಅವರ ಹೇಳಿಕೆ ಮಾನವತೆಯ ಪ್ರತಿಬಿಂಬವಾಗಿದೆ. ಯುದ್ಧ ಎಂದಿದ್ದರೂ ವಿನಾಶಕಾರಿ, ಅದರಿಂದ ದೊರೆಯುವ ಲಾಭ ದೀರ್ಘ ಕಾಲ ಉಳಿಯಲಾರದು. ಇದನ್ನು ಅರ್ಥ ಮಾಡಿಕೊಂಡಿರುವ ಸ್ಪೇನ್ ದೇಶದ ಪ್ರಧಾನ ಮಂತ್ರಿ ನಿಲುವು ಅನುಕರಣೀಯ.

-ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

57 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago