ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಯುದ್ಧದ ಭೀಕರತೆ ದಿನೇ ದಿನೇ ಹೆಚ್ಚುತ್ತಿದೆ. ಜಾಗತಿಕ ಶಾಂತಿದೂತನಾದ ವಿಶ್ವ ಸಂಸ್ಥೆಯ ನಿಷ್ಕ್ರಿಯತೆ ಎದ್ದು ಕಾಣುತ್ತಿದೆ. ಈ ಬೇಡದ ಯುದ್ಧದಿಂದಾಗಿ ಇಡೀ ವಿಶ್ವವೇ ಪರಿತಪಿಸುವಂತಾಗಿದೆ. ಮತ್ತೊಂದು ಕಡೆ, ತೈಲ ಬೆಲೆಗಳು ಕ್ರಮೇಣ ಏರಲು ಪ್ರಾರಂಭವಾಗಿದೆ. ಈ ಎಲ್ಲದರ ಮಧ್ಯೆ ಸ್ಪೇನ್ ದೇಶ ಯುದ್ಧದ ವಿಚಾರದಲ್ಲಿ ತೆಗೆದುಕೊಂಡಿರುವ ನಿಲುವು ಐತಿಹಾಸಿಕವಾಗಿದೆ.
ಯಾವುದೇ ಕಾರಣಕ್ಕೂ ತನ್ನ ದೇಶದ ವಾಯು ನೆಲೆಗಳನ್ನು ಯುದ್ಧದ ಉದೇಶಕಾಗಿ ಬಳಸಲು ಅನುಮತಿ 9 ನೀಡುವುದಿಲ್ಲ ಹಾಗೂ ಅಂತಹ ಯುದ್ಧಕ್ಕೆ ಸಹಕಾರ ನೀಡುವುದಿಲ್ಲ ಎಂಬ ಆ ದೇಶದ ನಿರ್ಣಯ ಸ್ವಾಗತಾರ್ಹವಾಗಿದೆ. ಇದು ಕೇವಲ ರಾಜತಾಂತ್ರಿಕ ನಿಲುವಲ್ಲ, ಬದಲಿಗೆ ಮಾನವತೆಯ ದನಿ ಎಂದು ಹೇಳಿರುವ ಆ ದೇಶದ ಪ್ರಧಾನ ಮಂತ್ರಿ ಪೆಡೋ ಸ್ಟಾಂಚೆಟ್ ಭೂಮಿಗೆ ಮತ್ತು ಮನುಕುಲಕ್ಕೆ ಅಪಾಯ ತಂದೊಡ್ಡುವ ಯಾವುದೇ ರೀತಿಯ ಯುದ್ಧೋನ್ಮಾನದ ಕಾರ್ಯಗಳನ್ನು ತಾನು ಬೆಂಬಲಿಸುವುದಿಲ್ಲ ಎಂಬ ಅವರ ಹೇಳಿಕೆ ಮಾನವತೆಯ ಪ್ರತಿಬಿಂಬವಾಗಿದೆ. ಯುದ್ಧ ಎಂದಿದ್ದರೂ ವಿನಾಶಕಾರಿ, ಅದರಿಂದ ದೊರೆಯುವ ಲಾಭ ದೀರ್ಘ ಕಾಲ ಉಳಿಯಲಾರದು. ಇದನ್ನು ಅರ್ಥ ಮಾಡಿಕೊಂಡಿರುವ ಸ್ಪೇನ್ ದೇಶದ ಪ್ರಧಾನ ಮಂತ್ರಿ ನಿಲುವು ಅನುಕರಣೀಯ.
-ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…