ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಯುದ್ಧದ ಭೀಕರತೆ ದಿನೇ ದಿನೇ ಹೆಚ್ಚುತ್ತಿದೆ. ಜಾಗತಿಕ ಶಾಂತಿದೂತನಾದ ವಿಶ್ವ ಸಂಸ್ಥೆಯ ನಿಷ್ಕ್ರಿಯತೆ ಎದ್ದು ಕಾಣುತ್ತಿದೆ. ಈ ಬೇಡದ ಯುದ್ಧದಿಂದಾಗಿ ಇಡೀ ವಿಶ್ವವೇ ಪರಿತಪಿಸುವಂತಾಗಿದೆ. ಮತ್ತೊಂದು ಕಡೆ, ತೈಲ ಬೆಲೆಗಳು ಕ್ರಮೇಣ ಏರಲು ಪ್ರಾರಂಭವಾಗಿದೆ. ಈ ಎಲ್ಲದರ ಮಧ್ಯೆ ಸ್ಪೇನ್ ದೇಶ ಯುದ್ಧದ ವಿಚಾರದಲ್ಲಿ ತೆಗೆದುಕೊಂಡಿರುವ ನಿಲುವು ಐತಿಹಾಸಿಕವಾಗಿದೆ.
ಯಾವುದೇ ಕಾರಣಕ್ಕೂ ತನ್ನ ದೇಶದ ವಾಯು ನೆಲೆಗಳನ್ನು ಯುದ್ಧದ ಉದೇಶಕಾಗಿ ಬಳಸಲು ಅನುಮತಿ 9 ನೀಡುವುದಿಲ್ಲ ಹಾಗೂ ಅಂತಹ ಯುದ್ಧಕ್ಕೆ ಸಹಕಾರ ನೀಡುವುದಿಲ್ಲ ಎಂಬ ಆ ದೇಶದ ನಿರ್ಣಯ ಸ್ವಾಗತಾರ್ಹವಾಗಿದೆ. ಇದು ಕೇವಲ ರಾಜತಾಂತ್ರಿಕ ನಿಲುವಲ್ಲ, ಬದಲಿಗೆ ಮಾನವತೆಯ ದನಿ ಎಂದು ಹೇಳಿರುವ ಆ ದೇಶದ ಪ್ರಧಾನ ಮಂತ್ರಿ ಪೆಡೋ ಸ್ಟಾಂಚೆಟ್ ಭೂಮಿಗೆ ಮತ್ತು ಮನುಕುಲಕ್ಕೆ ಅಪಾಯ ತಂದೊಡ್ಡುವ ಯಾವುದೇ ರೀತಿಯ ಯುದ್ಧೋನ್ಮಾನದ ಕಾರ್ಯಗಳನ್ನು ತಾನು ಬೆಂಬಲಿಸುವುದಿಲ್ಲ ಎಂಬ ಅವರ ಹೇಳಿಕೆ ಮಾನವತೆಯ ಪ್ರತಿಬಿಂಬವಾಗಿದೆ. ಯುದ್ಧ ಎಂದಿದ್ದರೂ ವಿನಾಶಕಾರಿ, ಅದರಿಂದ ದೊರೆಯುವ ಲಾಭ ದೀರ್ಘ ಕಾಲ ಉಳಿಯಲಾರದು. ಇದನ್ನು ಅರ್ಥ ಮಾಡಿಕೊಂಡಿರುವ ಸ್ಪೇನ್ ದೇಶದ ಪ್ರಧಾನ ಮಂತ್ರಿ ನಿಲುವು ಅನುಕರಣೀಯ.
-ಕೆ. ವಿ. ವಾಸು, ವಿವೇಕಾನಂದ ನಗರ, ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…