ಓದುಗರ ಪತ್ರ

ಓದುಗರ ಪತ್ರ| ಬಾಲ್ಯ ವಿವಾಹಗಳಿಗೆ ಕಡಿವಾಣ ಬೀಳಲಿ

ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ ಹೆಣ್ಣುಮಕ್ಕಳನ್ನು ಬೇಗನೆ ಮದುವೆ
ಮಾಡಿಬಿಡುತ್ತಾರೆ.

ಕರ್ನಾಟಕದಲ್ಲಿ 8,348 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದರೆ, ಬೆಳಕಿಗೆ ಬಾರದ ಪ್ರಕರಣಗಳು ಇನ್ನೆಷ್ಟಿವೆಯೋ ಬಾಲ್ಯ ವಿವಾಹದ ಕುರಿತು ಜನರಲ್ಲಿ ಅರಿವಿನ ಕೊರತೆ ಇರುವುದರಿಂದ ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ. ಬಾಲ್ಯ ವಿವಾಹಗಳು ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೆಟ್ಟುಕೊಡುವ ಜತೆಗೆ ಅವರನ್ನು ಮಾನಸಿಕವಾಗಿಯೂ, ದೈಹಿಕವಾಗಿಯೂ
ದುರ್ಬಲಗೊಳಿಸುತ್ತವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ಈ ಸಾಮಾಜಿಕ ಪಿಡುಗಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಬಾಲ್ಯ ವಿವಾಹಗಳಿಗೆ ಕಡಿವಾಣ ಹಾಕಬೇಕಿದೆ.

-ಹೊ.ನಂ.ಅಂಕರಾಜು, ಮೈಸೂರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Share
Published by
ಚಂದು ಸಿಎನ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

7 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

7 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

7 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

8 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

8 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

8 hours ago