ಓದುಗರ ಪತ್ರ

ಓದುಗರ ಪತ್ರ| ಬಾಲ್ಯ ವಿವಾಹಗಳಿಗೆ ಕಡಿವಾಣ ಬೀಳಲಿ

ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ ಹೆಣ್ಣುಮಕ್ಕಳನ್ನು ಬೇಗನೆ ಮದುವೆ
ಮಾಡಿಬಿಡುತ್ತಾರೆ.

ಕರ್ನಾಟಕದಲ್ಲಿ 8,348 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದರೆ, ಬೆಳಕಿಗೆ ಬಾರದ ಪ್ರಕರಣಗಳು ಇನ್ನೆಷ್ಟಿವೆಯೋ ಬಾಲ್ಯ ವಿವಾಹದ ಕುರಿತು ಜನರಲ್ಲಿ ಅರಿವಿನ ಕೊರತೆ ಇರುವುದರಿಂದ ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ. ಬಾಲ್ಯ ವಿವಾಹಗಳು ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೆಟ್ಟುಕೊಡುವ ಜತೆಗೆ ಅವರನ್ನು ಮಾನಸಿಕವಾಗಿಯೂ, ದೈಹಿಕವಾಗಿಯೂ
ದುರ್ಬಲಗೊಳಿಸುತ್ತವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ಈ ಸಾಮಾಜಿಕ ಪಿಡುಗಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಬಾಲ್ಯ ವಿವಾಹಗಳಿಗೆ ಕಡಿವಾಣ ಹಾಕಬೇಕಿದೆ.

-ಹೊ.ನಂ.ಅಂಕರಾಜು, ಮೈಸೂರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Share
Published by
ಚಂದು ಸಿಎನ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago