ಇತ್ತೀಚೆಗೆ ಬಿಡುಗಡೆಯಾದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ಆಘಾತಕಾರಿ, ಬಾಲ್ಯ ವಿವಾಹ ಪ್ರಕರಣಗಳು ನಗರ ಭಾಗಗಳಿಗಿಂತ ಗ್ರಾಮೀಣ ಭಾಗಗಳಲ್ಲಿಯೇ ಹೆಚ್ಚಾಗಿರುವುದು ಕಂಡುಬಂದಿದೆ. ಆರ್ಥಿಕ ಸಂಕಷ್ಟದಿಂದಾಗಿಯೋ ಅಥವಾ ಇತರೆ ಸಮಸ್ಯೆಗಳಿಂದಾಗಿಯೋ ಹೆಣ್ಣುಮಕ್ಕಳನ್ನು ಬೇಗನೆ ಮದುವೆ
ಮಾಡಿಬಿಡುತ್ತಾರೆ.
ಕರ್ನಾಟಕದಲ್ಲಿ 8,348 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದರೆ, ಬೆಳಕಿಗೆ ಬಾರದ ಪ್ರಕರಣಗಳು ಇನ್ನೆಷ್ಟಿವೆಯೋ ಬಾಲ್ಯ ವಿವಾಹದ ಕುರಿತು ಜನರಲ್ಲಿ ಅರಿವಿನ ಕೊರತೆ ಇರುವುದರಿಂದ ಗ್ರಾಮೀಣ ಭಾಗಗಳಲ್ಲಿ ಈ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ. ಬಾಲ್ಯ ವಿವಾಹಗಳು ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೆಟ್ಟುಕೊಡುವ ಜತೆಗೆ ಅವರನ್ನು ಮಾನಸಿಕವಾಗಿಯೂ, ದೈಹಿಕವಾಗಿಯೂ
ದುರ್ಬಲಗೊಳಿಸುತ್ತವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ಈ ಸಾಮಾಜಿಕ ಪಿಡುಗಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಬಾಲ್ಯ ವಿವಾಹಗಳಿಗೆ ಕಡಿವಾಣ ಹಾಕಬೇಕಿದೆ.
-ಹೊ.ನಂ.ಅಂಕರಾಜು, ಮೈಸೂರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…