ಓದುಗರ ಪತ್ರ

ಓದುಗರ ಪತ್ರ | ತಿ. ನರಸೀಪುರ ಕುಂಭಮೇಳ ಜನ ಸ್ನೇಹಿಯಾಗಿರಲಿ

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ೩೦ ಮಂದಿ ಮೃತಪಟ್ಟಿದ್ದಾರೆ. ಅಲ್ಲಿನ ಸರ್ಕಾರ ದುರಂತದ ನಂತರ ಎಚ್ಚೆತ್ತುಕೊಂಡು ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿದೆ. ಇದು ‘ಕೊಳ್ಳೆ ಹೊಡೆದು ಹೋದ ಮೇಲೆ ಕೋಟೆ ಬಾಗಿಲು ಮುಚ್ಚಿದರು’ ಎಂಬ ಮಾತಿನಂತಿದೆ. ಇದೇ -ಬ್ರವರಿ ೧೦ರಿಂದ ೧೨ರ ವರೆಗೆ ಮೈಸೂರು ಜಿಲ್ಲೆ ತಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕೂಡ ಕುಂಭಮೇಳ ನಡೆಯಲಿದ್ದು, ಕುಂಭಮೇಳದಲ್ಲಿ ಪಾಲ್ಗೊಳ್ಳುವ ಜನರ ಸುರಕ್ಷತೆಗೆ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡಬೇಕು. ಒಟ್ಟಾರೆ ಈ ಮೇಳ ಜನಸ್ನೇಹಿಯಾಗಿರಬೇಕು.

ಧಾರ್ಮಿಕ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಡೆಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ಇರುತ್ತಾರೆ. ಆದರೆ, ಮಕ್ಕಳು, ಸೀಯರು ಮತ್ತು ವಯೋವೃದ್ಧರ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಅಗತ್ಯ. ಕುಂಭಮೇಳ ನಡೆಯಲಿರುವ ಮೂರು ದಿನಗಳೂ ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ. ಇವರಲ್ಲದೆ, ಹಲವು ವ್ಯಾಪಾರಿಗಳು, ಆಟಿಕೆಗಳನ್ನು ಮಾರುವವರು ದೊಡ್ಡ ಸಂಖ್ಯೆಯಲ್ಲೇ ಪಾಲ್ಗೊಳ್ಳುತ್ತಾರೆ. ಅವರಿಗೆ ಇಂತಹ ಮೇಳಗಳು ಹೊಟ್ಟೆಪಾಡಿನ ಮಾರ್ಗಗಳಾಗಿರುತ್ತವೆ. ಅವರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಏಕೆಂದರೆ ಅವರೆಲ್ಲ ಕುಟುಂಬ ಸಮೇತರಾಗಿ ಆಗಮಿಸುತ್ತಾರೆ. ಮುಖ್ಯವಾಗಿ ಪೊಲೀಸರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು. ಕುಂಭಮೇಳ ಮುಗಿಸಿ ಎಲ್ಲರೂ ಸಂಭ್ರಮ, ನೆನಪುಗಳೊಂದಿಗೆ ಸ್ವಸ್ಥಾನಗಳಿಗೆ ಹಿಂದಿರುಗುವಂತಾಗಬೇಕು. ಈ ಸಂಬಂಧ ಜಿಲ್ಲಾಡಳಿತ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು.

-ಜಿ. ಎಸ್. ಪವನ್, ಗಾಂಧಿನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

34 mins ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

3 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

4 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

7 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

8 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

13 hours ago