Mysore
28
broken clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

dgp murder case

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ ಸ್ತಂಭ ) ಪಶ್ಚಿಮ ಏಷ್ಯಾದ ಅಮೆರಿಕ -ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವುದರಿಂದ ದೇಶದಲ್ಲಿ ಲಾಕ್ ಡೌನ್ ಜರಿಗೆ ಬರಬಹುದೆಂಬ ವಾರ್ ಲಾಕ್ ಡೌನ್ ನೋಟಿಸ್ ಎಂದು ಕೇಂದ್ರ ಸರ್ಕಾರದ ಅಧಿಕೃತ ಆದೇಶವೆಂಬಂತೆ ಕೃತಕವಾಗಿ ಸೃಷ್ಟಿಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಹೀಗೆ ಸುಳ್ಳು ಹರಡುವವರ ವಿರುದ್ಧ ಅಥವಾ ಜಾಲತಾಣಗಳ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಜಾಲತಾಣಗಳ ಮೂಲ ಹುಡುಕುವುದು ಪೊಲೀಸ್ ಇಲಾಖೆಗೆ ಸಾಧ್ಯವಿಲ್ಲವೇ? ಇತ್ತೀಚೆಗೆ ಕೆಲವು ಸಾಮಾಜಿಕ ಜಾಲ ತಾಣಗಳು ಇಂತಹ ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ. ಇಂತಹವರ ವಿರುದ್ಧ ಪೋಲಿಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

Tags:
error: Content is protected !!