ಓದುಗರ ಪತ್ರ
ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಗಾಯನಕ್ಕೆ ಡಿಎಂಕೆ ನೇತೃತ್ವದ ಸರ್ಕಾರ ನಿರಾಕರಿಸಿರುವುದು ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ.
ಡಿಎಂಕೆ ಪಕ್ಷದ ಈ ನಡೆಯನ್ನು ಖಂಡಿಸಿ ರುವ ಅಲ್ಲಿನ ರಾಜ್ಯಪಾಲರು ತಮ್ಮ ಸಾಂಪ್ರ ದಾಯಿಕ ಭಾಷಣ ಮಾಡದೇ ಸಭೆಯಿಂದ ನಿರ್ಗಮಿಸಿರುವುದರಿಂದ ಆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಕಳೆದ ವರ್ಷ ಕೂಡ ಅಲ್ಲಿನ ರಾಜ್ಯಪಾಲರು ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ, ವಿಧಾನಸಭೆಯಿಂದ ಹೊರ ನಡೆದಿದ್ದರು. ತಮಿಳುನಾಡಿನಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟು ಈ ಪ್ರಕರಣದಿಂದ ಮತ್ತಷ್ಟು ಉಲ್ಬಣಗೊಂಡಂತಾಗಿದೆ. ಸಾಮಾನ್ಯವಾಗಿ ಎಲ್ಲ ಸಭೆ- ಸಮಾರಂಭಗಳಲ್ಲೂ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ದೇಶದ ಐಕ್ಯತೆ, ಅಖಂಡತೆ ಮತ್ತು ಸಾರ್ವಭೌಮತ್ವಕ್ಕೆ ಗೌರವ ನೀಡಿ, ನಮ್ಮ ದೇಶದ ಭವ್ಯ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಮರಿಸಲಾಗುತ್ತದೆ. ಎಲ್ಲ ರಾಜ್ಯಗಳ ವಿಧಾನಸಭಾ ಅಽವೇಶನಗಳಲ್ಲಿಯೂ ಈ ಸಂಪ್ರದಾಯವನ್ನು ಪಾಲಿಸುವುದು ರೂಢಿ. ಆದರೆ ತಮಿಳುನಾಡಿನ ವಿಧಾನಸಭೆಯಲ್ಲಿ ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿರುವುದು ಸಂವಿಧಾನ ಬಾಹಿರವಾಗಿದೆ. ಇದು ನಿಜಕ್ಕೂ ಖಂಡನೀಯ. –
ಕೆ. ವಿ. ವಾಸು, ವಿವೇಕಾನಂದನಗರ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…