ಓದುಗರ ಪತ್ರ
ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಗಾಯನಕ್ಕೆ ಡಿಎಂಕೆ ನೇತೃತ್ವದ ಸರ್ಕಾರ ನಿರಾಕರಿಸಿರುವುದು ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ.
ಡಿಎಂಕೆ ಪಕ್ಷದ ಈ ನಡೆಯನ್ನು ಖಂಡಿಸಿ ರುವ ಅಲ್ಲಿನ ರಾಜ್ಯಪಾಲರು ತಮ್ಮ ಸಾಂಪ್ರ ದಾಯಿಕ ಭಾಷಣ ಮಾಡದೇ ಸಭೆಯಿಂದ ನಿರ್ಗಮಿಸಿರುವುದರಿಂದ ಆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಕಳೆದ ವರ್ಷ ಕೂಡ ಅಲ್ಲಿನ ರಾಜ್ಯಪಾಲರು ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ, ವಿಧಾನಸಭೆಯಿಂದ ಹೊರ ನಡೆದಿದ್ದರು. ತಮಿಳುನಾಡಿನಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟು ಈ ಪ್ರಕರಣದಿಂದ ಮತ್ತಷ್ಟು ಉಲ್ಬಣಗೊಂಡಂತಾಗಿದೆ. ಸಾಮಾನ್ಯವಾಗಿ ಎಲ್ಲ ಸಭೆ- ಸಮಾರಂಭಗಳಲ್ಲೂ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ದೇಶದ ಐಕ್ಯತೆ, ಅಖಂಡತೆ ಮತ್ತು ಸಾರ್ವಭೌಮತ್ವಕ್ಕೆ ಗೌರವ ನೀಡಿ, ನಮ್ಮ ದೇಶದ ಭವ್ಯ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಮರಿಸಲಾಗುತ್ತದೆ. ಎಲ್ಲ ರಾಜ್ಯಗಳ ವಿಧಾನಸಭಾ ಅಽವೇಶನಗಳಲ್ಲಿಯೂ ಈ ಸಂಪ್ರದಾಯವನ್ನು ಪಾಲಿಸುವುದು ರೂಢಿ. ಆದರೆ ತಮಿಳುನಾಡಿನ ವಿಧಾನಸಭೆಯಲ್ಲಿ ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿರುವುದು ಸಂವಿಧಾನ ಬಾಹಿರವಾಗಿದೆ. ಇದು ನಿಜಕ್ಕೂ ಖಂಡನೀಯ. –
ಕೆ. ವಿ. ವಾಸು, ವಿವೇಕಾನಂದನಗರ, ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…