ಓದುಗರ ಪತ್ರ
ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಗಾಯನಕ್ಕೆ ಡಿಎಂಕೆ ನೇತೃತ್ವದ ಸರ್ಕಾರ ನಿರಾಕರಿಸಿರುವುದು ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ.
ಡಿಎಂಕೆ ಪಕ್ಷದ ಈ ನಡೆಯನ್ನು ಖಂಡಿಸಿ ರುವ ಅಲ್ಲಿನ ರಾಜ್ಯಪಾಲರು ತಮ್ಮ ಸಾಂಪ್ರ ದಾಯಿಕ ಭಾಷಣ ಮಾಡದೇ ಸಭೆಯಿಂದ ನಿರ್ಗಮಿಸಿರುವುದರಿಂದ ಆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಕಳೆದ ವರ್ಷ ಕೂಡ ಅಲ್ಲಿನ ರಾಜ್ಯಪಾಲರು ತಮ್ಮ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ, ವಿಧಾನಸಭೆಯಿಂದ ಹೊರ ನಡೆದಿದ್ದರು. ತಮಿಳುನಾಡಿನಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟು ಈ ಪ್ರಕರಣದಿಂದ ಮತ್ತಷ್ಟು ಉಲ್ಬಣಗೊಂಡಂತಾಗಿದೆ. ಸಾಮಾನ್ಯವಾಗಿ ಎಲ್ಲ ಸಭೆ- ಸಮಾರಂಭಗಳಲ್ಲೂ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ದೇಶದ ಐಕ್ಯತೆ, ಅಖಂಡತೆ ಮತ್ತು ಸಾರ್ವಭೌಮತ್ವಕ್ಕೆ ಗೌರವ ನೀಡಿ, ನಮ್ಮ ದೇಶದ ಭವ್ಯ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಮರಿಸಲಾಗುತ್ತದೆ. ಎಲ್ಲ ರಾಜ್ಯಗಳ ವಿಧಾನಸಭಾ ಅಽವೇಶನಗಳಲ್ಲಿಯೂ ಈ ಸಂಪ್ರದಾಯವನ್ನು ಪಾಲಿಸುವುದು ರೂಢಿ. ಆದರೆ ತಮಿಳುನಾಡಿನ ವಿಧಾನಸಭೆಯಲ್ಲಿ ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿರುವುದು ಸಂವಿಧಾನ ಬಾಹಿರವಾಗಿದೆ. ಇದು ನಿಜಕ್ಕೂ ಖಂಡನೀಯ. –
ಕೆ. ವಿ. ವಾಸು, ವಿವೇಕಾನಂದನಗರ, ಮೈಸೂರು
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…