ರಸ್ತೆ ಅಭಿವೃದ್ಧಿಯ ನೆಪದಲ್ಲಿ ಮೈಸೂರಿನ ಹೈದರಾಲಿ ರಸ್ತೆಯಲ್ಲಿದ್ದ ೪೦ ಕ್ಕೂ ಹೆಚ್ಚು ಮರಗಳನ್ನು ರಾತ್ರೋರಾತ್ರಿ ಕಡಿದುರುಳಿಸಿದ್ದು, ಪರಿಸರ ಪ್ರಿಯರಿಗೆ ಬೇಸರ ತರಿಸಿದೆ.
ಈ ಮಾರ್ಗದಲ್ಲಿ ಸಂಚರಿಸುವಾಗ ಹಸಿರಿನ ಸಿರಿಯನ್ನು ಕಣ್ತುಂಬಿಕೊಳ್ಳುತ್ತಿದ್ದವರಿಗೆ ಮುಂಜಾನೆಯೇ ಆಘಾತ ಕಾದಿತ್ತು. ಏಕೆಂದರೆ ೪೦ಕ್ಕೂ ಹೆಚ್ಚು ಮರಗಳನ್ನು ಗುತ್ತಿಗೆ ಪಡೆದಿದ್ದವರು ಕಡಿದುರುಳಿಸಿದ್ದರು.
ಚಿಕ್ಕಂದಿನಿಂದಲೂ ಈ ಮರಗಳ ನೆರಳಿನಲ್ಲಿ ಆಡಿ ಬೆಳೆದಿದ್ದವರು ಬೆಳಗಾಗುವುದರೊಳಗೆ ಮರಗಳನ್ನು ಧರೆಗುರುಳಿಸಿರುವುದನ್ನು ಕಂಡು ಆಘಾತಕ್ಕೆ ಒಳಗಾಗಿದ್ದಾರೆ. ರಸ್ತೆ ಮೊದಲಾದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮುನ್ನ ಸಂಬಂಧಪಟ್ಟವರು ಮರಗಳನ್ನು ಉಳಿಸಿಕೊಂಡು ಪರ್ಯಾಯ ಮಾರ್ಗಗಳನ್ನು ಕಂಡು ಕೊಳ್ಳುವುದು ಅಗತ್ಯ.
ನಗರ ಪಾಲಿಕೆಯವರು ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿದಿರುವುದು ನೋವಿನ ಸಂಗತಿಯಾಗಿದೆ. – ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…