ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕೆಂದು ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವಂದ್ವ ನೀತಿ ಈಗ ಬಯಲಾಗಿದೆ.
ಶಾಂತಿಯ ಮಂತ್ರ ಜಪಿಸುತ್ತಲೇ ಈಗ ಅವರೇ ಇರಾನ್ ಮೇಲೆ ಯುದ್ಧ ಸಾರುತ್ತಿರುವುದು ಜಗತ್ತಿನ ದುರಂತ. ಈ ಯುದ್ಧದ ಹಪಾಹಪಿಯಿಂದಾಗಿ ಅಮಾಯಕರ ಸಾವು- ನೋವು ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು, ಅನಿಲ ಪೂರೈಕೆ ವ್ಯತ್ಯಯ ಮತ್ತು ಷೇರು ಮಾರುಕಟ್ಟೆಯ ಕುಸಿತದಿಂದಾಗಿ ಇಡೀ ವಿಶ್ವದ ಆರ್ಥಿಕತೆ ಅಲ್ಲೋಲ ಕಲ್ಲೋಲವಾಗಿದೆ. ಅಧಿಕಾರದ ಅಮಲಿನಲ್ಲಿ ಶಾಂತಿಭಂಗ ಮಾಡುತ್ತಿರುವ ಇಂತಹ ನಾಯಕರಿಗೆ ವಿಶ್ವಸಂಸ್ಥೆ ಮತ್ತು ಜಾಗತಿಕ ಸಮುದಾಯವು ಬುದ್ಧಿ ಹೇಳಬೇಕಿದೆ. ಪ್ರಶಸ್ತಿಗಾಗಿ ಅಂಗಲಾಚುವವರು ಮೊದಲು ರಕ್ತಪಾತ ನಿಲ್ಲಿಸಿ ನೈಜ ಶಾಂತಿ ಸ್ಥಾಪಿಸಲು ಮುಂದಾಗಲಿ.
-ಬಿ. ಗಣೇಶ, ಕೆ. ಜಿ. ಕೊಪ್ಪಲು,ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…