ಓದುಗರ ಪತ್ರ

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕೆಂದು ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವಂದ್ವ ನೀತಿ ಈಗ ಬಯಲಾಗಿದೆ.

ಶಾಂತಿಯ ಮಂತ್ರ ಜಪಿಸುತ್ತಲೇ ಈಗ ಅವರೇ ಇರಾನ್ ಮೇಲೆ ಯುದ್ಧ ಸಾರುತ್ತಿರುವುದು ಜಗತ್ತಿನ ದುರಂತ. ಈ ಯುದ್ಧದ ಹಪಾಹಪಿಯಿಂದಾಗಿ ಅಮಾಯಕರ ಸಾವು- ನೋವು ಮಾತ್ರವಲ್ಲದೆ, ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು, ಅನಿಲ ಪೂರೈಕೆ ವ್ಯತ್ಯಯ ಮತ್ತು ಷೇರು ಮಾರುಕಟ್ಟೆಯ ಕುಸಿತದಿಂದಾಗಿ ಇಡೀ ವಿಶ್ವದ ಆರ್ಥಿಕತೆ ಅಲ್ಲೋಲ ಕಲ್ಲೋಲವಾಗಿದೆ. ಅಧಿಕಾರದ ಅಮಲಿನಲ್ಲಿ ಶಾಂತಿಭಂಗ ಮಾಡುತ್ತಿರುವ ಇಂತಹ ನಾಯಕರಿಗೆ ವಿಶ್ವಸಂಸ್ಥೆ ಮತ್ತು ಜಾಗತಿಕ ಸಮುದಾಯವು ಬುದ್ಧಿ ಹೇಳಬೇಕಿದೆ. ಪ್ರಶಸ್ತಿಗಾಗಿ ಅಂಗಲಾಚುವವರು ಮೊದಲು ರಕ್ತಪಾತ ನಿಲ್ಲಿಸಿ ನೈಜ ಶಾಂತಿ ಸ್ಥಾಪಿಸಲು ಮುಂದಾಗಲಿ.

-ಬಿ. ಗಣೇಶ, ಕೆ. ಜಿ. ಕೊಪ್ಪಲು,ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

10 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

10 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

10 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

13 hours ago