ಓದುಗರ ಪತ್ರ

ಓದುಗರ ಪತ್ರ | ಬಿಸಿಲ ಬೇಗೆ ಮತ್ತು ನಕಲಿ ಮಾವಿನ ರಸದ ಹಾವಳಿ

ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಂಪೆನಿಗಳು ಬಹು ಮುಖ್ಯವಾಗಿ ಮಾವಿನ ಹಣ್ಣಿನ ರಸದ ಹೆಸರಿನಲ್ಲಿ ಮಾರಕ ರಾಸಾಯನಿಕಗಳನ್ನು ಜನರಿಗೆ ಕುಡಿಸುತ್ತಿವೆ . ಈ ಪಾನೀಯಗಳಲ್ಲಿ ಮಾವಿನ ಹಣ್ಣಿನ ಬದಲು ಟರ್ಟ್ರಾಜಿನ್ ನಂತಹ ಕೃತಕ ಬಣ್ಣ ಹಾಗೂ ಹೈ ಫ್ರಕ್ಟೋಸ್ ಕಾರ್ನ್ ಸಿರಪ್ ಬಳಸಲಾಗುತ್ತಿದೆ. ಇದು ಯಕೃತ್ತಿನ ಕಾಯಿಲೆ ಹಾಗೂ ಮಕ್ಕಳಲ್ಲಿ ಗಂಭೀರ ಪರಿಣಾಮ ಉಂಟುಮಾಡುತ್ತವೆ ಎಂಬ ಮಾಹಿತಿಗಳಿವೆ. ಇನ್ನು ತಯಾರಿಕಾ ಘಟಕಗಳ ಅಶುಚಿತ್ವ ಮತ್ತು ಕಲುಷಿತ ನೀರಿನ ಬಳಕೆಯು ಟೈಫಾಯ್ಡ್ ಹಾಗೂ ಕಾಲರಾದಂತಹ ರೋಗಗಳಿಗೆ ದಾರಿಯಾಗಿದೆ. ಅಂಕಿ ಅಂಶಗಳ ಪ್ರಕಾರ ಇಂತಹ ಪಾನೀಯಗಳಲ್ಲಿ ಶೇ.99ರಷ್ಟು ಹಣ್ಣಿನ ಅಂಶವೇ ಇರುವುದಿಲ್ಲ. ಸರ್ಕಾರವು ಆಹಾರ ಸುರಕ್ಷತಾ ತಪಾಸಣೆಯನ್ನು ತೀವ್ರಗೊಳಿಸಬೇಕು ಮತ್ತು ಕಲಬೆರಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.
– ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

1 hour ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

2 hours ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

2 hours ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

3 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

3 hours ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

3 hours ago